ಬ್ರೇಕಿಂಗ್ ನ್ಯೂಸ್
12-12-22 10:44 pm HK News Desk ಕ್ರೈಂ
ಶಿವಮೊಗ್ಗ, ಡಿ.12 : ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಎನ್ನೋದು ಇದಕ್ಕೇ ಇರಬೇಕು. ಆಸ್ತಿ ಪಾಲು ಕೊಡದ ಸಿಟ್ಟಿನಲ್ಲಿ ಅಪ್ಪನನ್ನು ಮಕ್ಕಳೇ ಸುಪಾರಿ ನೀಡಿ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದ್ದು, ಕೆಎಸ್ಆರ್ ಪಿ ನಿವೃತ್ತ ಎಆರ್ ಎಸ್ಐ ನಾಗೇಂದ್ರಪ್ಪ ಕೊಲೆಯಾದ ವ್ಯಕ್ತಿ. ಕಳೆದ ನವೆಂಬರ್ 29 ರಂದು ಶಿರಾಳಕೊಪ್ಪದಲ್ಲಿ ಚರಂಡಿಯಲ್ಲಿ ಅನಾಥ ಶವ ಸಿಕ್ಕಿತ್ತು. ಕೆಎಸ್ಆರ್ಪಿಯ ನಿವೃತ್ತ ಎಆರ್ ಎಸ್ಐ, ಶಿವಮೊಗ್ಗದ ಶಿರಾಳಕೊಪ್ಪದ ಭೋಗಿ ಗ್ರಾಮದ ನಾಗೇಂದ್ರಪ್ಪ ಅವರ ಶವವೆಂದು ಗುರುತಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ಇದರ ಹಿಂದಿನ ರಹಸ್ಯವನ್ನು ಬಯಲಿಗೆಳೆದಿದ್ದಾರೆ.
ನಾಗೇಂದ್ರಪ್ಪ ಅವರು ಭದ್ರಾವತಿ ಕೋರ್ಟ್ ಗೆ ಹೋಗಿ, ವಾಪಸ್ ಶಿಕಾರಿಪುರಕ್ಕೆ ಬರುತ್ತಿದ್ದ ವೇಳೆ ಆರೋಪಿಗಳು ಅವರನ್ನು ತಮ್ಮ ಆಟೋದಲ್ಲಿ ಹತ್ತಿಸಿಕೊಂಡಿದ್ದರು. ಪುಣೇದಹಳ್ಳಿ ಗ್ರಾಮದ ಬಳಿ ಕರೆದೊಯ್ದು, ಬಲವಂತದಿಂದ ನಶೆ ಬರುವ ಔಷಧಿ ಕುಡಿಸಿದ್ದಾರೆ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಅದೇ ಆಟೋದಲ್ಲಿ ಶವ ಸಾಗಾಟ ಮಾಡಿದ್ದಾರೆ. ಬಳಿಕ ಆರೋಪಿಗಳು ಉಡುಗಣಿ ಗ್ರಾಮದಿಂದ ಕುಸ್ಕೂರು ಗ್ರಾಮಕ್ಕೆ ಹೋಗುವ ಮಣ್ಣಿನ ರಸ್ತೆಯ ಪಕ್ಕದಲ್ಲಿ ಚರಂಡಿಗೆ ಶವ ಎಸೆದಿದ್ದಾರೆ.
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿರುವ ಪೊಲೀಸರು ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಿದ್ದಾರೆ. ಮಂಜುನಾಥ್, ಉಮೇಶ್, ರಿಜ್ವಾನ್, ಹಬೀಬ್ ಉಲ್ಲಾ ಹಾಗೂ ಸುಹೇಲ್ ಬಾಷಾ ಪೊಲೀಸರ ಅತಿಥಿಯಾಗಿದ್ದು ಸುಪಾರಿ ಪಡೆದು ಕೊಲ್ಲಿಸಿದ್ದಾಗಿ ತಪ್ಪೊಪ್ಪಿಗೆ ನೀಡಿದ್ದಾರೆ.
ನವೆಂಬರ್ 9 ರಂದು ಮೊದಲ ಬಾರಿಗೆ ನಾಗೇಂದ್ರಪ್ಪ ಕೊಲೆ ಯತ್ನ ನಡೆದಿತ್ತು. ಗೂಡ್ಸ್ ಆಟೋದಲ್ಲಿ ನಾಗೇಂದ್ರಪ್ಪ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಸಲಾಗಿತ್ತು. ಈ ವೇಳೆ ನಾಗೇಂದ್ರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಘಟನೆ ಬಗ್ಗೆ ದೂರು ದಾಖಲಾಗಿರಲಿಲ್ಲ. ಈ ಬಾರಿ ಉಪಾಯದಿಂದಲೇ ಕರೆದೊಯ್ದು ಸಾಯಿಸಿದ್ದಾರೆ.
A police head constable and his brother allegedly hired ‘supari’ (contract) killers to murder their father, a retired police official, over a property dispute, at Bhogi in Shikaripur taluk of Shivamogga district in Karnataka. Shikaripur police solved the murder of Nagendrappa, 68, which was reported on November 29. They arrested five persons, including the victim’s sons Manjunath, 42, a driver at Shiralakoppa, and Umesh, 40, a police head constable with KSRP 4 th Battallion in Bengaluru.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm