ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm