ಬ್ರೇಕಿಂಗ್ ನ್ಯೂಸ್
13-12-22 11:56 am Mangalore Correspondent ಕ್ರೈಂ
ಉಳ್ಳಾಲ, ಡಿ.13 : ತೆಂಗಿನ ಕಾಯಿ ಕೀಳಲೆಂದು ಬಂದ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಯಲ್ಲಿ ಒಬ್ಬಂಟಿಯಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಬಶೀರ್(29)ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಬಶೀರ್ ಸೋಮವಾರ ಸಂಜೆ ದೇರಳಕಟ್ಟೆಯ ಸಂಬಂಧಿಕರ ಮನೆಗೆ ತೆರಳಿದ್ದು ಈ ವೇಳೆ ಪಕ್ಕದ ಪರಿಚಯಸ್ಥರ ಮನೆಗೆ ಕಾಯಿ ಕೀಳಲೆಂದು ತೆರಳಿದ್ದಾನೆ. ಮನೆಯಲ್ಲಿ ಒಬ್ಬಂಟಿಯಿದ್ದ ಬಾಲಕಿಯನ್ನ ಕೈ ಹಿಡಿದು ಎಳೆದಿದ್ದು ಬಾಲಕಿ ಕಿರುಚಾಡಿದ್ದಾಳೆ. ಬಾಲಕಿಯ ಕೂಗನ್ನ ಕೇಳಿಸಿದ ನೆರೆಹೊರೆಯವರು ಓಡಿ ಬಂದಿದ್ದು ಅದಾಗಲೇ ಆರೋಪಿ ಸ್ಥಳದಿಂದ ಓಡಿ ಪರಾರಿಯಾಗಿದ್ದ.

ಸಂತ್ರಸ್ತ ಬಾಲಕಿಯ ಕುಟುಂಬವು ಆರೋಪಿ ಬಶೀರ್ ಕುಟುಂಬಕ್ಕೆ ಆಪ್ತರಾಗಿದ್ದು ಕೆಲ ತಿಂಗಳ ಹಿಂದಷ್ಟೆ ನಡೆದಿದ್ದ ಬಶೀರನ ಸೋದರಿಯ ಮದುವೆ ಸಮಾರಂಭದಲ್ಲಿಯೂ ಭಾಗವಹಿಸಿದ್ದರು. ಬಾಲಕಿಯ ಕುಟುಂಬ ಆರೋಪಿಯ ವಿರುದ್ಧ ದೂರು ನೀಡಲು ಹಿಂಜರಿದಿದ್ದು ನೆರೆಹೊರೆಯವರ ಒತ್ತಾಯದ ಮೇರೆಗೆ ಸಂತ್ರಸ್ತ ಬಾಲಕಿಯ ಅಜ್ಜ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ. ಹಿಂದು ಸಮಾಜದ ಮೇಲೆ ಅನ್ಯಮತೀಯರು ಪದೇ ಪದೇ ನಂಬಿಕೆ ದ್ರೋಹ ಎಸಗುತ್ತಿದ್ದು ಬಾಲಕಿಗೆ ಕಿರುಕುಳ ನೀಡಿದ ಆರೋಪಿ ಬಶೀರನನ್ನ ಶೀಘ್ರ ಬಂಧಿಸುವಂತೆ ವಿಶ್ವ ಹಿಂದು ಪರಿಷತ್, ಬಜರಂಗದಳದ ಪ್ರಮುಖರಾದ ಗೋಪಾಲ್ ಕುತ್ತಾರು, ಪದ್ಮನಾಭ ಮರ್ಕೆದು ಆಗ್ರಹಿಸಿದ್ದಾರೆ.
Mangalore Girl sexually harassed in Ullal, Bajarang dal members demand for arrest, POSCO case registered.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm