ಬ್ರೇಕಿಂಗ್ ನ್ಯೂಸ್
23-12-22 10:18 pm HK News Desk ಕ್ರೈಂ
ನವದೆಹಲಿ, ಡಿ.24: ಜಾರ್ಖಂಡಿನಲ್ಲಿ ಕಲ್ಲಿದ್ದಲು ವಿದ್ಯುತ್ ಸ್ಥಾವರ ಹೊಂದಿರುವ ಖಾಸಗಿ ರಂಗದ ಕಾರ್ಪೊರೇಟ್ ಪವರ್ ಲಿಮಿಟೆಡ್ ಕಂಪನಿಯು 4 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಸಾಲ ಪಡೆದು ಮೋಸ ನಡೆಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಂಪನಿಯ ಡೈರೆಕ್ಟರುಗಳು, ಸರಕಾರಿ ಅಧಿಕಾರಿ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಂಪನಿ ಹೆಸರಲ್ಲಿ ನಕಲಿ ದಾಖಲೆ ಪತ್ರಗಳನ್ನು ಮುಂದಿಟ್ಟು 20 ಬ್ಯಾಂಕುಗಳಿಂದ 4037 ಕೋಟಿ ರೂಪಾಯಿ ಸಾಲ ಪಡೆದು ಮೋಸ ಎಸಗಲಾಗಿದೆ. ಈ ಬಗ್ಗೆ ಯೂನಿಯನ್ ಬ್ಯಾಂಕ್ ನೇತೃತ್ವದಲ್ಲಿ ಸಿಬಿಐಗೆ ದೂರು ನೀಡಲಾಗಿತ್ತು.
ಸಿಬಿಐ ಅಧಿಕಾರಿಗಳು ಏಕಕಾಲದಲ್ಲಿ ಪ್ರಕರಣ ಸಂಬಂಧಿಸಿ ಮುಂಬೈ, ಕೊಲ್ಕತ್ತಾ, ನಾಗಪುರ, ರಾಂಚಿ, ವಿಶಾಖಪಟ್ನಂ, ದುರ್ಗಾಪುರ್, ಗಾಜಿಯಾಬಾದ್ ಸೇರಿ 16 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಕಾರ್ಪೊರೇಟ್ ಪವರ್ ಲಿಮಿಟೆಟ್ ಮಾತೃಸಂಸ್ಥೆಯಾದ ಅಭಿಜಿತ್ ಗ್ರೂಪ್ ಚೇರ್ಮನ್ ಮನೋಜ್ ಜೈಸ್ವಾಲ್, ಆಡಳಿತ ನಿರ್ದೇಶಕ ಅಭಿಷೇಕ್ ಜೈಸ್ವಾಲ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
2009ರಿಂದ 2013ರ ನಡುವೆ ಯೋಜನೆಯ ಬಗ್ಗೆ ತಪ್ಪಾದ ಖರ್ಚು-ವೆಚ್ಚಗಳ ವರದಿ ಕೊಟ್ಟು ಬ್ಯಾಂಕ್ ಅಧಿಕಾರಿಗಳನ್ನು ಮೋಸ ಮಾಡಲಾಗಿದೆ. ವ್ಯಾಪಾರ- ವಹಿವಾಟು ಲೆಕ್ಕ ತೋರಿಸಿ, ಬೇನಾಮಿ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಆಮೂಲಕ ಬ್ಯಾಂಕಿಗೆ ಮೋಸ ಮಾಡಲಾಗಿದೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
The Central Bureau of Investigation (CBI) has filed an FIR against Corporate Power Limited and its directors in an alleged Rs 4,000-crore bank fraud, CNBC TV-18 said on December 23.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm