ಬ್ರೇಕಿಂಗ್ ನ್ಯೂಸ್
24-12-22 11:58 am Mangalore Correspondent ಕ್ರೈಂ
ಮೂಡುಬಿದ್ರೆ, ಡಿ.24: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಜಾಗಕ್ಕೆ ಬೆಳ್ಳಂಬೆಳಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಜೊತೆಗೆ ದಾಳಿ ನಡೆಸಿದ ಘಟನೆ ಆಲಂಗಾರಿನಲ್ಲಿ ನಡೆದಿದೆ.
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂಡ ಎಂಬವನ ಮನೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳಗ್ಗೆ ನಾಲ್ಕು ಗಂಟೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ, ಮನೆಯ ಒಳಗಿನ ಕೋಣೆಯಲ್ಲಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದರು. ಇದಲ್ಲದೆ, ಕಡಿಯಲು ತಂದಿದ್ದ ನಾಲ್ಕು ಸಣ್ಣ ಪ್ರಾಯದ ಕರುಗಳನ್ನು ಒಳಗಡೆ ಕಟ್ಟಿದ್ದರು. ಭಾರೀ ಪ್ರಮಾಣದ ದನದ ಮಾಂಸ ಮತ್ತು ನಾಲ್ಕು ಗೋವುಗಳನ್ನು ವಶಕ್ಕೆ ಪಡೆಯಲಾಗಿದೆ.



ಆನಂತರ, ಮನೆ ಪಕ್ಕದ ತೋಟದಲ್ಲಿ ಅಗೆದು ನೋಡಿದಾಗ ಹಲವಾರು ದನದ ತಲೆಯ ಭಾಗಗಳು ಪತ್ತೆಯಾಗಿವೆ. ಆಲಂಗಾರು ನಿವಾಸಿಗಳಾದ ಕ್ಲಾರಿನ್ ಆಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂಡ ಬಂಧಿತರು. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2020ರ ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ, ಲೈಸನ್ಸ್ ರಹಿತ ಯಾವುದೇ ಜಾಗದಲ್ಲಿ ಗೋವುಗಳನ್ನು ಕಡಿಯುವಂತಿಲ್ಲ. ಅಕ್ರಮ ಕಸಾಯಿಖಾನೆ ಪತ್ತೆಯಾದಲ್ಲಿ ಆ ಜಾಗವನ್ನು ಸರಕಾರದ ವಶಕ್ಕೆ ಪಡೆಯಬೇಕು. ಮನೆಯಾಗಿದ್ದರೆ, ಕಟ್ಟಡ ಕಂದಾಯ ಇಲಾಖೆಗೆ ಸೇರುತ್ತದೆ. ಈ ರೀತಿಯ ಕಠಿಣ ಕ್ರಮದಿಂದಾಗಿ ಅಕ್ರಮ ಕಸಾಯಿಖಾನೆ ಕಡಿಮೆಯಾಗಿತ್ತು. 13 ವಯಸ್ಸಿನ ಒಳಗಿನ ಗೋವುಗಳನ್ನು ಕಡಿಯುವಂತಿಲ್ಲ ಎಂಬ ನಿಯಮದಿಂದಾಗಿ ಅಧಿಕೃತ ಕಸಾಯಿಖಾನೆಗಳಿಗೆ ಮಾಂಸಕ್ಕಾಗಿ ಗೋವುಗಳ ಪೂರೈಕೆ ಆಗುತ್ತಿಲ್ಲ. ಗೋಹತ್ಯೆ ಕಾನೂನು ಬಂದ ಬಳಿಕ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಅಕ್ರಮ ಗೋಹತ್ಯೆಗೆ ಕಡಿವಾಣ ಬಿದ್ದಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಾಲ್ಕು ಕಡೆ ಗೋಹತ್ಯೆ ನಡೆಸಿದ ಜಾಗವನ್ನು ಸರಕಾರದ ವಶಕ್ಕೆ ಪಡೆಯಲಾಗಿದೆ.
Mangalore Illegal Sluaughter house inside home in Moodbidri, hindu jagarana vedike raids house
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm