ಬ್ರೇಕಿಂಗ್ ನ್ಯೂಸ್
24-12-22 11:58 am Mangalore Correspondent ಕ್ರೈಂ
ಮೂಡುಬಿದ್ರೆ, ಡಿ.24: ಮನೆಯೊಂದರಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಜಾಗಕ್ಕೆ ಬೆಳ್ಳಂಬೆಳಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ಜೊತೆಗೆ ದಾಳಿ ನಡೆಸಿದ ಘಟನೆ ಆಲಂಗಾರಿನಲ್ಲಿ ನಡೆದಿದೆ.
ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂಡ ಎಂಬವನ ಮನೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಬೆಳಗ್ಗೆ ನಾಲ್ಕು ಗಂಟೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ, ಮನೆಯ ಒಳಗಿನ ಕೋಣೆಯಲ್ಲಿ ದನವನ್ನು ಕಡಿದು ಮಾಂಸ ಮಾಡುತ್ತಿದ್ದರು. ಇದಲ್ಲದೆ, ಕಡಿಯಲು ತಂದಿದ್ದ ನಾಲ್ಕು ಸಣ್ಣ ಪ್ರಾಯದ ಕರುಗಳನ್ನು ಒಳಗಡೆ ಕಟ್ಟಿದ್ದರು. ಭಾರೀ ಪ್ರಮಾಣದ ದನದ ಮಾಂಸ ಮತ್ತು ನಾಲ್ಕು ಗೋವುಗಳನ್ನು ವಶಕ್ಕೆ ಪಡೆಯಲಾಗಿದೆ.



ಆನಂತರ, ಮನೆ ಪಕ್ಕದ ತೋಟದಲ್ಲಿ ಅಗೆದು ನೋಡಿದಾಗ ಹಲವಾರು ದನದ ತಲೆಯ ಭಾಗಗಳು ಪತ್ತೆಯಾಗಿವೆ. ಆಲಂಗಾರು ನಿವಾಸಿಗಳಾದ ಕ್ಲಾರಿನ್ ಆಲ್ವಿನ್ ಮತ್ತು ಗಿಲ್ಬರ್ಟ್ ಮಿರಾಂಡ ಬಂಧಿತರು. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2020ರ ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ, ಲೈಸನ್ಸ್ ರಹಿತ ಯಾವುದೇ ಜಾಗದಲ್ಲಿ ಗೋವುಗಳನ್ನು ಕಡಿಯುವಂತಿಲ್ಲ. ಅಕ್ರಮ ಕಸಾಯಿಖಾನೆ ಪತ್ತೆಯಾದಲ್ಲಿ ಆ ಜಾಗವನ್ನು ಸರಕಾರದ ವಶಕ್ಕೆ ಪಡೆಯಬೇಕು. ಮನೆಯಾಗಿದ್ದರೆ, ಕಟ್ಟಡ ಕಂದಾಯ ಇಲಾಖೆಗೆ ಸೇರುತ್ತದೆ. ಈ ರೀತಿಯ ಕಠಿಣ ಕ್ರಮದಿಂದಾಗಿ ಅಕ್ರಮ ಕಸಾಯಿಖಾನೆ ಕಡಿಮೆಯಾಗಿತ್ತು. 13 ವಯಸ್ಸಿನ ಒಳಗಿನ ಗೋವುಗಳನ್ನು ಕಡಿಯುವಂತಿಲ್ಲ ಎಂಬ ನಿಯಮದಿಂದಾಗಿ ಅಧಿಕೃತ ಕಸಾಯಿಖಾನೆಗಳಿಗೆ ಮಾಂಸಕ್ಕಾಗಿ ಗೋವುಗಳ ಪೂರೈಕೆ ಆಗುತ್ತಿಲ್ಲ. ಗೋಹತ್ಯೆ ಕಾನೂನು ಬಂದ ಬಳಿಕ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಅಕ್ರಮ ಗೋಹತ್ಯೆಗೆ ಕಡಿವಾಣ ಬಿದ್ದಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಾಲ್ಕು ಕಡೆ ಗೋಹತ್ಯೆ ನಡೆಸಿದ ಜಾಗವನ್ನು ಸರಕಾರದ ವಶಕ್ಕೆ ಪಡೆಯಲಾಗಿದೆ.
Mangalore Illegal Sluaughter house inside home in Moodbidri, hindu jagarana vedike raids house
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm