ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm