ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm