ಬ್ರೇಕಿಂಗ್ ನ್ಯೂಸ್
24-12-22 12:22 pm HK News Desk ಕ್ರೈಂ
ನವದೆಹಲಿ, ಡಿ.23: ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಲ್ಲಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನ ತಾಂತ್ರಿಕ ವಿವಿಯ ಸಹಾಯಕ ಪ್ರಾಧ್ಯಾಪಕ ಗಿರೀಶ್ ಪರ್ಮಾರ್ ಬಂಧಿತ ಆರೋಪಿ. ಬಿ.ಟೆಕ್ ಅಂತಿಮ ವರ್ಷದ ವಿದ್ಯಾರ್ಥಿನಿಗೆ ಹೆಚ್ಚು ಅಂಕ ನೀಡುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ಸಹಕರಿಸಲು ಗಿರೀಶ್ ಪರ್ಮಾರ್ ಕೇಳಿದ್ದ. ಇದಕ್ಕೆ ವಿದ್ಯಾರ್ಥಿನಿ ಒಪ್ಪದೇ ಇದ್ದಾಗ ಆಕೆಯನ್ನು ತನ್ನ ಸಬ್ಜೆಕ್ಟ್ನಲ್ಲಿ ಫೇಲ್ ಮಾಡಿದ್ದ.
ಇದರಿಂದ ಮನನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ಡಿಸೆಂಬರ್ 21 ರಂದು ಗಿರೀಶ್ ಪರ್ಮಾರ್ ನನ್ನು ಪೊಲೀಸರು ಬಂಧಿಸಿದ್ದು, ಡಿಸೆಂಬರ್ 22 ರಂದು ವಿಶ್ವವಿದ್ಯಾಲಯ ಆತನನ್ನು ಸೇವೆಯಿಂದ ಅಮಾನತುಗೊಳಿಸಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ವಿದ್ಯಾರ್ಥಿ ಅರ್ಪಿತ್ ಅಗರ್ವಾಲ್ ಮೂಲಕ ಗಿರೀಶ್ ಪರ್ಮಾರ್ ಆ ವಿದ್ಯಾರ್ಥಿನಿಗೆ ಲೈಂಗಿಕ ಕ್ರಿಯೆಗೆ ಬೇಡಿಕೆಯಿಟ್ಟಿದ್ದ. ಪ್ರಾಧ್ಯಾಪಕನಿಗೆ ಸಹಾಯ ಮಾಡಿದ ಅರ್ಪಿತ್ ಅಗರ್ವಾಲ್ನನ್ನೂ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಪರ್ಮಾರ್ ಮತ್ತು ಅರ್ಪಿತ್ ಅಗರ್ವಾಲ್ ವಿದ್ಯಾರ್ಥಿನಿ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕೂಡ ಲೀಕ್ ಆಗಿದೆ.
ದಾದಾಭರಿ ಪೊಲೀಸ್ ಠಾಣೆಯಲ್ಲಿ ಪ್ರಾಧ್ಯಾಪಕ ಹಾಗೂ ಅರ್ಪಿತ್ ಅಗರ್ವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 385, 354 (ಎ), 354 (ಡಿ), 384 ಮತ್ತು 509ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರ್ ಸಿಂಗ್ ಹೇಳಿದ್ದಾರೆ.
A professor at the Rajasthan Technical University in Kota was detained after it was alleged that he had pressured a final-year student for sexual favours and had failed her in the course when she refused. The professor is identified as Girish Parmar.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm