ಬ್ರೇಕಿಂಗ್ ನ್ಯೂಸ್
24-12-22 04:36 pm HK News Desk ಕ್ರೈಂ
ಕಾನ್ಪುರ, ಡಿ.24: ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಸ್ ಬಿಐ ಬ್ಯಾಂಕಿನ ಗೋಡೆ ಕೊರೆದು ಕಳ್ಳರು ನುಗ್ಗಿದ್ದು ಲಾಕರ್ ಒಡೆದು 1.8 ಕಿಲೋ ಗ್ರಾಮ್ ತೂಕದ ಚಿನ್ನಾಭರಣ ದೋಚಿದ್ದಾರೆ.
ಕಟ್ಟಡದ ಅಡಿಪಾಯದ ಕೆಳಗೆ ಐದು ಮೀಟರ್ ಆಳದ ವರೆಗೂ ಅಗೆದು, ಸುರಂಗ ಕೊರೆದು ಬ್ಯಾಂಕಿನ ಒಳ ನುಗ್ಗಿದ್ದಾರೆ. ಬಳಿಕ ಸ್ಟ್ರಾಂಗ್ರೂಮ್ ನುಗ್ಗಿದ ಕಳ್ಳರು, 1.8 ಕೆಜಿ ಚಿನ್ನವನ್ನು ಕಳವು ಮಾಡಿದ್ದಾರೆ. ಇದು ರಾಜ್ಯದಲ್ಲಿ ಕಳೆದ 25 ವರ್ಷಗಳಲ್ಲಿ ನಡೆದ ಅತಿದೊಡ್ಡ ಕಳ್ಳತನ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಎಂದಿನಂತೆ ಬ್ಯಾಂಕ್ಗೆ ಬಂದ ಉದ್ಯೋಗಿಗಳಿಗೆ, ಕಳ್ಳತನ ಆಗಿರುವುದು ಪತ್ತೆಯಾಗಿದೆ. ಕಳ್ಳರು ಎಂಟು ಮೀಟರ್ ಉದ್ದ, ಮೂರು ಅಡಿ ಆಳದ ಸುರಂಗವನ್ನು ತೋಡಿದ್ದಾರೆ. ಸುರಂಗದ ಹೊರಬದಿ ಪೊದೆಗಳಿಂದ ಆವೃತವಾಗಿತ್ತು. ಹೀಗಾಗಿ ಸುರಂಗ ಕೊರೆದಿರುವುದು ಬೇರೆಯವರಿಗೆ ಗೊತ್ತಾಗಿರಲಿಲ್ಲ.

"ಸುರಂಗ ಕೊರೆಯಲು ಕಳ್ಳರು ದಿನಗಳನ್ನು ತೆಗೆದುಕೊಂಡಿರಬಹುದು. ಅಷ್ಟು ನಿಖರತೆಯಿಂದ ಒಳಗಡೆ ಸರಿಯಾದ ಸ್ಥಳಕ್ಕೆ ಗುರಿ ಇಟ್ಟು ಸುರಂಗ ಮಾಡಿದ್ದಾರೆ. ಕಳ್ಳರಿಗೆ ಪ್ರಮುಖ ಮಾಹಿತಿಯನ್ನು ಒಳಗಿನವರೇ ರವಾನಿಸಿದ್ದಾರೆ ಎಂಬ ಶಂಕೆಯಿದೆ" ಎಂದು ಕಾನ್ಪುರ ಪೊಲೀಸ್ ಕಮಿಷನರ್ ಬಿಪಿ ಜೋಗ್ದಂಡ್ ಹೇಳಿದ್ದಾರೆ.

29 ಜನರು ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನವನ್ನು ಆ ಲಾಕರ್ನಲ್ಲಿ ಇಡಲಾಗಿತ್ತು. ಲಾಕರ್ ಬಾಗಿಲು ಒಡೆಯಲು ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ್ದಾರೆ ಎಂದು ಬ್ಯಾಂಕ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಳ್ಳತನದ ವೇಳೆ ಎಚ್ಚರಿಕೆಯ ಹೆಜ್ಜೆ ಇಟ್ಟಿರುವ ದರೋಡೆಕೋರರು, ಸ್ಟ್ರಾಂಗ್ರೂಮ್ನಲ್ಲಿರುವ ಏಕೈಕ ಸಿಸಿಟಿವಿ ಕ್ಯಾಮರಾವನ್ನು ಬೇರೆ ಕಡೆಗೆ ತಿರುಗಿಸಿದ್ದರು.
)
ಲಾಕರಿನಲ್ಲಿದ್ದ 1.812 ಕೆಜಿ ತೂಕದ ಎಲ್ಲಾ ಚಿನ್ನವನ್ನು ಹೊತ್ತೊಯ್ದಿರುವ ಕಳ್ಳರು ಅದರ ಪಕ್ಕದ ಲಾಕರ್ನಲ್ಲಿ ಇಟ್ಟಿದ್ದ 35 ಲಕ್ಷ ರೂಪಾಯಿ ನಗದಿನಲ್ಲಿ ಒಂದು ರೂಪಾಯಿಯನ್ನೂ ಮುಟ್ಟಿಲ್ಲ ಎನ್ನುವುದು ವಿಶೇಷ.
Thieves broke open a chest at a bank in Uttar Pradesh's Kanpur and stole gold worth ₹ 1 crore. They entered the bank's vault through a 10-feet-long tunnel, the police said today. They dug the four-feet-wide tunnel from an empty plot adjacent to the State Bank of India's Bhanuti branch, the police said.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm