ಬ್ರೇಕಿಂಗ್ ನ್ಯೂಸ್
16-10-20 10:07 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 16: ಬೆಂಗಳೂರಿನಲ್ಲಿ ಪಬ್ ನಡೆಸುತ್ತಿದ್ದ ಕೊಪ್ಪ ಮೂಲದ ಮನೀಶ್ ಶೆಟ್ಟಿ ಎಂಬಾತನನ್ನು ವಿರೋಧಿ ಗ್ಯಾಂಗ್ ಶೂಟೌಟ್ ಮಾಡಿ ಕೊಂದು ಮುಗಿಸಿದೆ.
ಮನೀಶ್ ಶೆಟ್ಟಿ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ ಸಹಚರನಾಗಿದ್ದ. ಪೊಲೀಸ್ ಬಲೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿರುವ ರಶೀದ್ ಮಲಬಾರಿ ಗ್ಯಾಂಗ್ ಈ ಶೂಟೌಟ್ ನಡೆಸಿದೆ ಎನ್ನುವ ಗುಮಾನಿಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ತಲವಾರು ಬದಲಿಗೆ ಸಿಂಗಲ್ ಬ್ಯಾರೆಲ್ ಗನ್ ಮೂಲಕ ಈ ಕೃತ್ಯ ನಡೆಸಿರುವ ಹಿನ್ನೆಲೆಯಲ್ಲಿ ಕರಾವಳಿ ಮೂಲದ ಹಂತಕರು ಕೃತ್ಯದ ಹಿಂದಿದ್ದಾರೆ ಎನ್ನಲಾಗುತ್ತಿದೆ.
ಮನೀಶ್ ಶೆಟ್ಟಿ ಕೂಡ ರೌಡಿ ಶೀಟರ್ ಆಗಿದ್ದು ಕೊಲೆ, ದರೋಡೆ ಸೇರಿ ಹಲವು ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿರುವ ಡ್ಯೂಯೆಟ್ ಪಬ್ ಓನರ್ ಆಗಿದ್ದ ಮನೀಶ್ ಶೆಟ್ಟಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮನೀಶ್ ಶೆಟ್ಟಿ ತನ್ನ ಪಬ್ ಎದುರು ನಿಂತಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಮನೀಶ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾನೆ.
ದಕ್ಷಿಣ ಕನ್ನಡ, ಮುಂಬೈನಲ್ಲಿ ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ಮಂಗಳೂರಿನಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು. ಬನ್ನಂಜೆ ರಾಜಾನ ಆಪ್ತನಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದರು. ಬನ್ನಂಜೆ ರಾಜಾ ಕಳೆದ ಫೆಬ್ರವರಿಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಮೊರಕ್ಕೋದಲ್ಲಿ ಬಂಧಿಸಿದ್ದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಖಚಿತ ಸುಳಿವು ಲಭಿಸಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.
A bar owner was shot dead by anonymous bike-borne attackers in full public view in front of his bar in Bangalore on Thursday. The motive for the murder is yet to be ascertained.The deceased has been identified as Manish Shetty (45) alias Sarvotham Shetty, who hailed from Koppa.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am