ಬ್ರೇಕಿಂಗ್ ನ್ಯೂಸ್
16-10-20 10:07 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 16: ಬೆಂಗಳೂರಿನಲ್ಲಿ ಪಬ್ ನಡೆಸುತ್ತಿದ್ದ ಕೊಪ್ಪ ಮೂಲದ ಮನೀಶ್ ಶೆಟ್ಟಿ ಎಂಬಾತನನ್ನು ವಿರೋಧಿ ಗ್ಯಾಂಗ್ ಶೂಟೌಟ್ ಮಾಡಿ ಕೊಂದು ಮುಗಿಸಿದೆ.
ಮನೀಶ್ ಶೆಟ್ಟಿ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ ಸಹಚರನಾಗಿದ್ದ. ಪೊಲೀಸ್ ಬಲೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿರುವ ರಶೀದ್ ಮಲಬಾರಿ ಗ್ಯಾಂಗ್ ಈ ಶೂಟೌಟ್ ನಡೆಸಿದೆ ಎನ್ನುವ ಗುಮಾನಿಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ತಲವಾರು ಬದಲಿಗೆ ಸಿಂಗಲ್ ಬ್ಯಾರೆಲ್ ಗನ್ ಮೂಲಕ ಈ ಕೃತ್ಯ ನಡೆಸಿರುವ ಹಿನ್ನೆಲೆಯಲ್ಲಿ ಕರಾವಳಿ ಮೂಲದ ಹಂತಕರು ಕೃತ್ಯದ ಹಿಂದಿದ್ದಾರೆ ಎನ್ನಲಾಗುತ್ತಿದೆ.




ಮನೀಶ್ ಶೆಟ್ಟಿ ಕೂಡ ರೌಡಿ ಶೀಟರ್ ಆಗಿದ್ದು ಕೊಲೆ, ದರೋಡೆ ಸೇರಿ ಹಲವು ಕೃತ್ಯಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿರುವ ಡ್ಯೂಯೆಟ್ ಪಬ್ ಓನರ್ ಆಗಿದ್ದ ಮನೀಶ್ ಶೆಟ್ಟಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಮನೀಶ್ ಶೆಟ್ಟಿ ತನ್ನ ಪಬ್ ಎದುರು ನಿಂತಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಮನೀಶ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾನೆ.
ದಕ್ಷಿಣ ಕನ್ನಡ, ಮುಂಬೈನಲ್ಲಿ ಕೊಲೆಯತ್ನ, ಕೊಲೆ, ದರೋಡೆ ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ಮಂಗಳೂರಿನಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು. ಬನ್ನಂಜೆ ರಾಜಾನ ಆಪ್ತನಾಗಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದರು. ಬನ್ನಂಜೆ ರಾಜಾ ಕಳೆದ ಫೆಬ್ರವರಿಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಮೊರಕ್ಕೋದಲ್ಲಿ ಬಂಧಿಸಿದ್ದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಕಮಿಷನರ್ ಕಮಲ್ ಪಂತ್, ಕೃತ್ಯದ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ಖಚಿತ ಸುಳಿವು ಲಭಿಸಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.
A bar owner was shot dead by anonymous bike-borne attackers in full public view in front of his bar in Bangalore on Thursday. The motive for the murder is yet to be ascertained.The deceased has been identified as Manish Shetty (45) alias Sarvotham Shetty, who hailed from Koppa.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm