ಬ್ರೇಕಿಂಗ್ ನ್ಯೂಸ್
26-12-22 05:35 pm Mangalore Correspondent ಕ್ರೈಂ
ಉಳ್ಳಾಲ, ಡಿ.26 : ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಭಂಡಾರಿ ಅವರು ಡ್ರಗ್ ಸಾಗಾಟದ ವಿರುದ್ಧ ಸಮರ ಸಾರಿದ್ದು ಇಂದು ಬೆಳಗ್ಗೆ ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಮತ್ತು ಕೇರಳ ಮೂಲದ ನಾಲ್ಕು ಡ್ರಗ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂದ್ಯೋಡು ನಿವಾಸಿ ಮಹಮ್ಮದ್ ನೌಫಾಲ್(24), ಮಲಪ್ಪುರಂ ಜಿಲ್ಲೆಯ ಪೊನ್ನಾನಿ ನಿವಾಸಿ ಜಂಶೀರ್(24), ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ನಿವಾಸಿ ಮಹಮ್ಮದ್ ಬಾತಿಷ್ (37), ಕಾಸರಗೋಡು ಜಿಲ್ಲೆಯ ಮುಟ್ಟತೇಡಿ ನಿವಾಸಿ ಮಹಮ್ಮದ್ ಅಶ್ರಫ್(42) ಬಂಧಿತ ಡ್ರಗ್ ಪೆಡ್ಲರ್ ಗಳು.
ಕೊಣಾಜೆ ಪೊಲೀಸ್ ಠಾಣೆ ಪಿಎಸ್ಸೈ ಶರಣಪ್ಪ ಭಂಢಾರಿ ಮತ್ತು ತಂಡ ಚೇಳೂರಿನ ಚೆಕ್ ಪೋಸ್ಟಲ್ಲಿ ಗಸ್ತಲ್ಲಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಂದ ಉಪ್ಪಿನಂಗಡಿ, ಮೆಲ್ಕಾರ್ ಮಾರ್ಗವಾಗಿ ಕೇರಳಕ್ಕೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆಲ್ಟೋ ಕಾರನ್ನ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆಲ್ಟೋ ಕಾರಲ್ಲಿ 3,19,000 ಮೌಲ್ಯದ 32.195 ಕೆ.ಜಿ ಗಾಂಜಾ ಸಾಗಾಟ ನಡೆಸುತ್ತಿರುವುದು ಕಂಡುಬಂದಿದೆ. ನಿಷೇಧಿತ ಗಾಂಜಾ, ಕಾರು ಮತ್ತು ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.



ಪಿಎಸ್ಐ ಶರಣಪ್ಪ ಅವರು ವಾರದ ಹಿಂದೆ ಡಿ.17 ರಂದು ಬೋಳಿಯಾರಲ್ಲಿ ಕಾರನ್ನ ತಡೆದು ಭಾರೀ ಪ್ರಮಾಣದ ನಿಷೇಧಿತ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತುಗಳನ್ನ ದಸ್ತಗಿರಿ ನಡೆಸಿ ನಾಲ್ವರು ಪೆಡ್ಲರ್ ಗಳನ್ನ ಬಂಧಿಸಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ 4 ಮೊಬೈಲ್, ಆಲ್ಟೋ ಕಾರನ್ನ ವಶ ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶೈಲೇಂದ್ರ, ಮಹಮ್ಮದ್ ಶರೀಫ್, ಮಹೇಶ್,ಪುರುಷೋತ್ತಮ್, ದೀಪಕ್ ಅಂಬರೀಷ್, ಅಶ್ವಿನ್, ಸುರೇಶ್, ಬರಮ ಬಡಿಗೇರ, ರೇಷ್ಮಾ, ಸುನೀತ ಭಾಗವಹಿಸಿದ್ದರು.
Mangalore Three lakhs worth Ganja seized by Konaje Police PSI Sharanappa. Four have been arrested who were transporting Ganja from Bangalore.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm