ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.


ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm