ಬ್ರೇಕಿಂಗ್ ನ್ಯೂಸ್
27-12-22 05:09 pm Mangalore Correspondent ಕ್ರೈಂ
ಮಂಗಳೂರು, ಡಿ.27: ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ.
ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.


ಶೈಲೇಶ್ ಮತ್ತು ಸವಿನ್ ಕಾಂಚನ್ ರೌಡಿ ಶೀಟರ್ ಗಳಾಗಿದ್ದು ಕೃತ್ಯ ಎಸಗಿದವರು. ಹಿಂದು ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಇರಿಸಿಕೊಂಡ ಕಾರಣಕ್ಕೆ ಶೈಲೇಶ್ ಪೂಜಾರಿ, ಜಲೀಲ್ ಜೊತೆಗೆ ಜಟಾಪಟಿ ಮಾಡಿಕೊಂಡಿದ್ದ. ಈ ಹಿಂದೆ ಜಲೀಲ್ ಗೆ, ಮಹಿಳೆಯ ಸಂಬಂಧ ಬಿಡುವಂತೆ ಎಚ್ಚರಿಕೆಯನ್ನೂ ನೀಡಿದ್ದ. ಮೊನ್ನೆ ಶನಿವಾರ ಬೆಳಗ್ಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಎದುರಿನಲ್ಲಿ ಸಿಕ್ಕಿದ್ದ ಜಲೀಲನಿಗೆ ನಿನ್ನನ್ನು ಬಿಡುವುದಿಲ್ಲ ಎಂದು ಹೇಳಿ ಬೆದರಿಕೆಯನ್ನೂ ಹಾಕಿದ್ದ. ಅದೇ ದಿನ ಮಧ್ಯಾಹ್ನ ಸುರತ್ಕಲ್ಲಿನ ಶೇಂದಿ ಅಂಗಡಿಯಲ್ಲಿ ಕುಳಿತು ಸವಿನ್ ಕಾಂಚನ್ ಬರಹೇಳಿ, ಸಂಜೆ ವೇಳೆಗೆ ಕೃತ್ಯ ಎಸಗುವ ಬಗ್ಗೆ ಪ್ಲಾನ್ ಹಾಕಿದ್ದರು.
ಆರೋಪಿಗಳಲ್ಲಿ ಒಬ್ಬಾತನಿಗೆ ಆ ಮಹಿಳೆಯ ಜೊತೆಗೆ ಸ್ನೇಹ ಇತ್ತು. ಹಾಗಾಗಿ, ಜಲೀಲ್ ಜೊತೆಗೆ ಸಂಬಂಧ ಬಿಟ್ಟು ಬಿಡುವಂತೆ ಆಕೆಗೂ ಸೂಚಿಸಿದ್ದರು. ಆದರೆ ಜಲೀಲ್, ಮಹಿಳೆಗೆ ಸ್ಕೂಟರ್ ತೆಗೆಸಿಕೊಟ್ಟು ತನ್ನ ಸಂಬಂಧ ಮುಂದುವರಿಸಿದ್ದ. ಇದೇ ಸಿಟ್ಟಿನಲ್ಲಿ ನಾಲ್ವರು ಸೇರಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Surathkal Jaleel Murder case, Lakshmish Devadiga fourth accused arrested in Mangalore. Earlier, three persons Shailesh Poojary (21) from Krishnapura, Savin Kanchan (24) from Hejamady and Pavan (23) from Katipalla were arrested. Shailesh and Savin are also the accused in Pinky Nawaz murder attempt case who is the prime accused of the 2018 Deepak Rao murder case.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm