ಬ್ರೇಕಿಂಗ್ ನ್ಯೂಸ್
03-01-23 05:00 pm Mangalore Correspondent ಕ್ರೈಂ
ಮಂಗಳೂರು, ಜ.3 : ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32) ಮತ್ತು ಜೆಪ್ಪಿನಮೊಗರಿನ ರಜೀಮ್ ಯಾನೆ ರಾಫಿ (31) ಬಂಧಿತರು.
ಆರೋಪಿಗಳು ಜನವರಿ 2 ರಂದು ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಕೂಟರ್ ಒಂದನ್ನು ಸುಲಿಗೆ ಮಾಡಿದ್ದರು. ಅದೇ ದಿನ ಸಂಜೆ ಈ ಸ್ಕೂಟರ್ನಲ್ಲಿ ಆರೋಪಿಗಳು ಖೋಟಾ ನೋಟುಗಳನ್ನು ಸಾಗಿಸುತ್ತಿದ್ದರು. ನಂತೂರಿನಲ್ಲಿ ಅನುಮಾನಾಸ್ಪದ ನೆಲೆಯಲ್ಲಿ ಕಂಡುಬಂದಿದ್ದು ಇವರನ್ನು ತಪಾಸಣೆ ನಡೆಸಿದಾಗ 500 ರೂ. ಮುಖಬೆಲೆಯ 4.50 ಲಕ್ಷ ಮೊತ್ತದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ನಕಲಿ ನೋಟುಗಳನ್ನು ಪಡೆದಿದ್ದಾಗಿ ಆರೋಪಿಗಳು ಮಾಹಿತಿ ನೀಡಿದ್ದಾರೆ. ನಂತೂರು ವೃತ್ತದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರ್ ನಿಲ್ಲಿಸದೆ ಅತಿವೇಗದಿಂದ ಸಾಗಿತ್ತು. ಬೆನ್ನತ್ತಿ ಹಿಡಿದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ ಖೋಟಾ ನೋಟು ಪತ್ತೆಯಾಗಿದೆ.
ಡ್ಯಾನಿಯಲ್ ಎಂಬಾತ ಇದಕ್ಕೂ ಮೊದಲೇ ಖೋಟಾ ನೋಟು ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿದ್ದ. ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಕಲಿ ನೋಟು ಮುದ್ರಿಸಿ ಕರ್ನಾಟಕದ ವಿವಿಧ ಕಡೆಗಳಲ್ಲಿ ವಿತರಿಸಿದ್ದ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಆರೋಪಿ ನಿಜಾಂ ವಿರುದ್ದ ಈ ಹಿಂದೆ 2015 ರಲ್ಲಿ ವಿಟ್ಲದಲ್ಲಿ ಕೊಲೆ ಪ್ರಕರಣ, 2015 ರಲ್ಲಿ ಮಂಗಳೂರು ಕಾರಾಗೃಹದಲ್ಲಿ ಕೊಲೆ ಪ್ರಕರಣ, 2017 ರಲ್ಲಿ ಕೊಡಗಿನ ಕುಶಾಲನಗರ ಠಾಣೆಯಲ್ಲಿ ದರೋಡೆ ಪ್ರಕರಣ, 2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣ ಮತ್ತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು. ಆರೋಪಿ ರಾಫಿ ವಿರುದ್ದ ಉರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸ್ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನವನ್ನು ಕಮಿಷನರ್ ಘೋಷಣೆ ಮಾಡಿದ್ದಾರೆ.
Police arrested two persons with Rs 500 counterfeit currency notes worth Rs 4.5 lac. The arrested are identified as Nizamuddin (32) from BC Road and Rajeem (31) from Jeppu.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm