ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm