ಬ್ರೇಕಿಂಗ್ ನ್ಯೂಸ್
06-01-23 06:10 pm Mangalore Correspondent ಕ್ರೈಂ
ಪುತ್ತೂರು, ಜ.6: ಪಿಯುಸಿ ಓದುತ್ತಿದ್ದ ಅಪ್ರಾಪ್ತ ಹುಡುಗಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನನ್ನು ಹೊತ್ತೊಯ್ದು ಹಳೆ ಕಟ್ಟಡದಲ್ಲಿ ಕೂಡಿ ಹಾಕಿ ಹಲ್ಲೆಗೈದ ಘಟನೆ ಸುಬ್ರಹ್ಮಣ್ಯ ಬಳಿ ನಡೆದಿದೆ. 10ರಿಂದ 12 ಜನ ಯುವಕರು ಸೇರಿ ದೊಣ್ಣೆಯಿಂದ ಹಲ್ಲೆಗೈದಿದ್ದಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲುಗುಂಡಿ ನಿವಾಸಿ ಅಫೀದ್(20) ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ 17 ವರ್ಷದ ಯುವತಿ ಇನ್ಸ್ಟಾ ಗ್ರಾಮ್ ನಲ್ಲಿ ಕನೆಕ್ಟ್ ಆಗಿದ್ದು ಜ.5ರಂದು ಸಂಜೆ ಸುಬ್ರಹ್ಮಣ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ನಿಂತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಯುವಕ ಹುಡುಗಿಗೆ ಚಾಕಲೇಟ್ ನೀಡುತ್ತಿದ್ದಾಗ ಮೂವರು ಅಪರಿಚಿತ ಯುವಕರು ಬಂದು ಅಫೀದ್ ನನ್ನು ಜೀಪಿನಲ್ಲಿ ಬಲವಂತದಿಂದ ಕರೆದೊಯ್ದಿದ್ದಾರೆ. ಬಳಿಕ ಕುಮಾರಧಾರಾ ಜಂಕ್ಷನ್ ಬಳಿಯ ಹಳೇ ಕಟ್ಟಡದಲ್ಲಿ ಯುವಕನನ್ನು ಕೂಡಿ ಹಾಕಿ 10ರಿಂದ 12 ಜನ ಸೇರಿ ಹಲ್ಲೆ ನಡೆಸಿದ್ದಾರೆ. ಆರೋಪಿತ ಯುವಕರು ಎಸ್ ಎಸ್ ಪಿಯು ಎಂದು ಬರೆದಿದ್ದ ಬಿಳಿ ಬಣ್ಣದ ಟೀ ಶರ್ಟ್ ಧರಿಸಿದ್ದರು. ಯಾವುದೋ ಸಂಘಟನೆ ಯುವಕರು ಸೇರಿ ನೈತಿಕ ಪೊಲೀಸ್ ಗಿರಿ ಕೃತ್ಯ ನಡೆಸಿದ್ದಾರೆಂಬ ಆರೋಪ ವ್ಯಕ್ತವಾಗಿದೆ. ಈ ವೇಳೆ, ಒಬ್ಬಾತ ಚೂರಿಯಿಂದ ತಿವಿಯಲು ಯತ್ನಿಸಿದ್ದು ಇನ್ನೊಬ್ಬಾತ ತಡೆದು ಮುಂದೆ ನಮ್ಮ ಹುಡುಗಿಯರ ತಂಟೆಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆಂದು ದೂರಲಾಗಿದೆ.

ಯುವಕನ ವಿರುದ್ಧ ಹುಡುಗಿ ತಂದೆಯಿಂದಲೂ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. 17 ವರ್ಷದ ತನ್ನ ಅಪ್ರಾಪ್ತ ಮಗಳನ್ನು ಪ್ರೀತಿಸಲು ಒತ್ತಾಯಿಸಿ ಕೈಹಿಡಿದೆಳೆದು ಮಾನಭಂಗಕ್ಕೆ ಯತ್ನಿಸಿದ್ದಾಗಿ ಯುವಕನ ವಿರುದ್ಧ ದೂರು ನೀಡಿದ್ದಾರೆ. ಆರೋಪಿ ಯುವಕ ಅಫೀದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Subrahmanya moral policing, mulsim youth brutally thrashed for talking with Hindu girl, posco case registered by girls father stating that his daughter was forced to love.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm