ಬ್ರೇಕಿಂಗ್ ನ್ಯೂಸ್
06-01-23 08:47 pm Bangalore Correspondent ಕ್ರೈಂ
ಬೆಂಗಳೂರು, ಜ.6: ಭಾರತೀಯ ಕರೆನ್ಸಿ 2 ಸಾವಿರ ಹಾಗೂ 500 ರೂ. ಮುಖಬೆಲೆಯ ಖೋಟಾ ನೋಟು ತಯಾರಿ ಮಾಡಿ ನಗರದಲ್ಲಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ತಮಿಳು ನಾಡಿನ ಮೂವರು ಆರೋಪಿಗಳನ್ನು ಬಂಧಿಸಿ 1.28 ಕೋಟಿ ರೂ. ಖೋಟಾ ನೋಟುಗಳು ಮತ್ತು ನೋಟು ತಯಾರಿಸಲು ಉಪಯೋಗಿಸುತ್ತಿದ್ದ ಪ್ರಿಂಟರ್ ಹಾರ್ಡ್ಡಿಸ್ಕ್ ಮತ್ತು ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ತಮಿಳು ನಾಡಿನ ಪಿಚ್ಚಿಮುತ್ತು(48), ನಲ್ಲಕಣಿ(53) ಮತ್ತು ಸುಬ್ರಮಣಿಯನ್(60) ಬಂಧಿತ ಆರೋಪಿಗಳು. ತಮಿಳುನಾಡಿನಲ್ಲಿ ಭಾರತೀಯ ಕರೆನ್ಸಿಯ 2 ಸಾವಿರ ಮತ್ತು 500 ರೂ. ಮುಖಬೆಲೆಯ ಖೋಟಾ ನೋಟು ಮುದ್ರಣ ಮಾಡಿಕೊಂಡು ಚಲಾವಣೆ ಮಾಡಲು ತಮಿಳುನಾಡಿನ ಬಸ್ನಲ್ಲಿ ಆರೋಪಿಗಳು ಬೆಂಗಳೂರಿಗೆ ಬರುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ತಕ್ಷಣ ಸಿಸಿಬಿ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಈ ಜಾಲದ ಮತ್ತಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಶದಿಂದ 2 ಸಾವಿರ ರೂ. ಮುಖಬೆಲೆಯ 6203 ಭಾರತೀಯ ಖೋಟಾ ನೋಟುಗಳು (1,24,06,000 ರೂ.) ಹಾಗೂ 500 ರೂ. ಮುಖಬೆಲೆಯ 174 ಭಾರತೀಯ ಖೋಟಾ ನೋಟುಗಳು (87 ಸಾವಿರ ರೂ.) ಮತ್ತು ಬಿಳಿ ಬಣ್ಣದ ರೆಡ್ಮಿ-6 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Bengaluru CCB Police bust fake currency, seize 1.28 crores.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm