ಬ್ರೇಕಿಂಗ್ ನ್ಯೂಸ್
19-01-23 01:43 pm HK News Desk ಕ್ರೈಂ
ಹೈದರಾಬಾದ್, ಜ.19: ತೆಲಂಗಾಣದಲ್ಲಿ ಸರ್ಕಾರಿ ಉದ್ಯೋಗಿಯೊಬ್ಬರು ವಿಮೆ ಹಣಕ್ಕಾಗಿ, ತಾನು ಕಾರಿನ ಸಮೇತ ಸುಟ್ಟು ಭಸ್ಮವಾದಂತೆ ನಾಟಕವಾಡಿರುವ ಪ್ರಕರಣ ತಡವಾಗಿ ಬಯಲಾಗಿದೆ.
7.4 ಕೋಟಿ ಮೊತ್ತದ ವಿಮೆ ಹಣಕ್ಕಾಗಿ ಆರೋಪಿ ತನ್ನದೇ ಸಾವಿನ ಬಗ್ಗೆ ಕಥೆ ಹೆಣೆದಿದ್ದಾನೆ. ಪೊಲೀಸರ ತನಿಖೆಯಿಂದ ಆತನ ಸಂಚು ಬಯಲಾಗಿದ್ದು, ಆತನ ಪತ್ನಿ ಹಾಗೂ ಇಬ್ಬರು ಸಂಬಂಧಿಕರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಮೇದಕ್ ಎಸ್ಪಿ ರೋಹಿಣಿ ಪ್ರಿಯದರ್ಶಿನಿ ತಿಳಿಸಿದ್ದಾರೆ.
44 ವರ್ಷದ ಪ್ರಮುಖ ಆರೋಪಿ ಮಾಲೋತ್ ಧರ್ಮ ತೆಲಂಗಾಣ ರಾಜ್ಯ ಸಚಿವಾಲಯದಲ್ಲಿ ಸಹಾಯಕ ಸೆಕ್ಷನ್ ಆಫೀಸರ್ (ಎಎಸ್ಒ) ಆಗಿ ಕೆಲಸ ಮಾಡುತ್ತಿದ್ದ. ಷೇರು ಮಾರುಕಟ್ಟೆಯಲ್ಲಿ 85 ಲಕ್ಷ ನಷ್ಟ ಅನುಭವಿಸಿದ ಆತ, ಪತ್ನಿ ಹಾಗೂ ಸಂಬಂಧಿಕರೊಂದಿಗೆ ಸೇರಿ ವಿಮೆ ಹಣ ಕ್ಲೈಮ್ ಮಾಡಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಮೇದಕ್ನಲ್ಲಿ ಅನುಮಾನಾಸ್ಪದ ಸಾವು ಪ್ರಕರಣವೊಂದು ದಾಖಲಾಗಿತ್ತು. ಪೊಲೀಸರ ತನಿಖೆ ವೇಳೆ ಆಘಾತಕಾರಿ ಸಂಗತಿಗಳು ಹೊರಬಂದಿವೆ. ಎಂಟು ದಿನಗಳ ಹಿಂದೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹವೊಂದು ಕಾರಿನಲ್ಲಿ ಪತ್ತೆಯಾಗಿತ್ತು. ಇದನ್ನು ಮಾಲೋತ್ ಧರ್ಮ ಅವರ ಮೃತದೇಹ ಎಂದು ಬಿಂಬಿಸಲಾಗಿತ್ತು.
ಕಾರಿನಲ್ಲಿ ಮೃತಪಟ್ಟಿದ್ದ ವ್ಯಕ್ತಿಯನ್ನು ಬಾಬು ಎಂದು ಗುರುತಿಸಲಾಗಿದೆ. ಧರ್ಮ ಮತ್ತು ಅವನ ಸೋದರಳಿಯ ಶ್ರೀನಿವಾಸ್ ಸೇರಿ ಬಾಬುರನ್ನು ಹತ್ಯೆ ಮಾಡಿದ್ದರು. ಬಳಿಕ ಆತ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ಬಿಂಬಿಸಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
ಘಟನೆ ವಿವರ ;
ಜ. 9ರಂದು ಮೇದಕ್ನ ವೆಂಕಟಾಪುರದಲ್ಲಿ ಕಾರೊಂದು ಹೊತ್ತಿ ಉರಿಯುತ್ತಿರುವುದನ್ನು ಕಂಡ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಾಹನವು ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದು ಬೆಂಕಿ ಹೊತ್ತಿಕೊಂಡಿರಬಹುದು. ಇದರ ಪರಿಣಾಮ ಚಾಲಕ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದರು.
ಘಟನಾ ಸ್ಥಳದಲ್ಲಿ ಧರ್ಮ ಅವರ ಐಡಿ ಕಾರ್ಡ್ ಸೇರಿದಂತೆ ಕೆಲವು ಪರಿಕರಗಳು ಪತ್ತೆಯಾಗಿದ್ದವು. ಸುಟ್ಟು ಕರಕಲಾದ ಮೃತದೇಹ ಧರ್ಮ ಅವರದ್ದೇ ಎಂದು ಕುಟುಂಬಸ್ಥರು ಗುರುತಿಸಿದ್ದರು.
ಘಟನೆ ಕುರಿತು ತನಿಖೆ ನಡೆಸಿದ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ, ಧರ್ಮ ಅವರ ಫೋನ್ ಕರೆಗಳ ಪರಿಶೀಲನೆ ನಡೆಸಿದ್ದರು.
ಕೃತ್ಯದ ಮರು ದಿನ ವಿಡಿಯೊವೊಂದರಲ್ಲಿ ಧರ್ಮ ಅವರನ್ನು ಹೋಲುವಂತೆ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು, ಧರ್ಮ ಸತ್ತಿಲ್ಲ, ಬದಲಾಗಿ ಬೇರೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದರು.
ವಿಮೆ ಹಣಕ್ಕಾಗಿ ನಾಟಕ:
ಧರ್ಮ ಹೆಸರಿನಲ್ಲಿ ಹಲವು ವಿಮೆ ಪಾಲಿಸಿಗಳಿವೆ. ಹೀಗಾಗಿ ತನ್ನದೇ ಸಾವಿನ ಕುರಿತು ನಾಟಕವಾಡಿದ್ದು, ಮೃತದೇಹ ಧರ್ಮ ಅವರದ್ದೇ ಎಂದು ಗುರುತಿಸಿದ್ದ ಕುಟುಂಬಸ್ಥರು ಅಂತ್ಯ ಸಂಸ್ಕಾರವನ್ನು ನಡೆಸಿದ್ದಾರೆ. ತಮ್ಮ ಸಂಬಂಧಿಕರ ಮೂಲಕ ವಿಮೆ ಹಣ ಪಡೆದುಕೊಳ್ಳಲು ಧರ್ಮ ಸಂಚು ರೂಪಿಸಿದ್ದ.
ಧರ್ಮ, ಜನವರಿ 5ರಿಂದ ರಜೆಯಲ್ಲಿದ್ದು, ಪತ್ನಿ ಜತೆ ವೆಂಕಟಾಪುರಕ್ಕೆ ತೆರಳಿದ್ದ. ಜ. 7ರಂದು ಹೈದರಾಬಾದ್ಗೆ ಮರಳಿದ್ದ. ಮರು ದಿನ ವೆಂಕಟಾಪುರದ ಹೊರವಲಯದಲ್ಲಿ ಆತನ ಕಾರಿನಲ್ಲಿ ಸುಟ್ಟ ದೇಹ ಪತ್ತೆಯಾಗಿತ್ತು.
A Telangana government official allegedly faked his own death to claim insurance money to the tune of over Rs 7 crore, reported news agency PTI. He was arrested along with four others, including his wife and two relatives, in Medak district. The prime accused was working as an Assistant Section Officer (ASO) in Telangana State Secretariat. He suffered losses of Rs 85 lakh in the stock market and hatched a plan along with his wife and relatives. He allegedly killed a man and faked his death to claim insurance amount to recover from the losses and to settle his debts, the police said.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
23-06-25 04:37 pm
HK News Desk
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm