ಬ್ರೇಕಿಂಗ್ ನ್ಯೂಸ್
18-10-20 07:32 pm Headline Karnataka News Network ಕ್ರೈಂ
ತೆಲಂಗಾಣ, ಅಕ್ಟೋಬರ್. 18 : ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ಹೆಚ್ಚುತ್ತಿದ್ದರೂ ಅತ್ಯಾಚಾರ ಕಮ್ಮಿ ಆಗುತ್ತಿಲ್ಲ. ತೆಲಂಗಾಣದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ಮಾನವ ಕುಲವನ್ನೇ ತಲೆತಗ್ಗಿಸಿದೆ.
ಅತ್ಯಾಚಾರ ವಿರೋಧಿಸಿದ ಕಾರಣಕ್ಕೆ 13 ವರ್ಷದ ಬುಡಕಟ್ಟು ಜನಾಂಗದ ಬಾಲಕಿಯನ್ನು ಮನೆ ಮಾಲೀಕನೇ ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ತೆಲಂಗಾಣದ ಖಮ್ಮಮ್ ನಲ್ಲಿ ನಡೆದಿದೆ.
ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಗುರುವಾರ ರಾತ್ರಿ ಹೈದರಾಬಾದ್ನ ಆಸ್ಪತ್ರೆಯಲ್ಲಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂದು ಖಮ್ಮಮ್ ಪೊಲೀಸ್ ಆಯುಕ್ತ ತಫ್ಸೀರ್ ಇಕ್ಬಾಲ್ ತಿಳಿಸಿದ್ದಾರೆ.
ಬಾಲಕಿಯನ್ನು ಮನೆ ಕೆಲಸಕ್ಕೆಂದು ಕರೆಸಿದ್ದ ಮನೆ ಮಾಲೀಕ ಆಕೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದು ಆಕೆ ವಿರೋಧಿಸಿದ್ದಾಳೆ. ಇದಕ್ಕಾಗಿ ಬಾಲಕಿಯನ್ನು ಪೆಟ್ರೋಲ್ನಿಂದ ಸುಟ್ಟು ಬೆಂಕಿ ಹಾಕಿದ್ದು, ದೇಹದ 70 ಶೇ. ಭಾಗ ಸುಟ್ಟು ಕರಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 18 ರಂದು ಈ ಘಟನೆ ಸಂಭವಿಸಿದ್ದು, ಅಕ್ಟೋಬರ್ 5 ರಂದು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮಾಧ್ಯಮದಲ್ಲಿ ವಿಚಾರ ಹೊರಬರುತ್ತಿದ್ದಂತೆ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ (ಟಿಎಸ್ಎಚ್ಆರ್ಸಿ) ಖಮ್ಮಮ್ ಪೊಲೀಸರಿಂದ ಘಟನೆ ಕುರಿತು ವರದಿ ಕೇಳಿದೆ.
ಇನ್ನು ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಇತ್ತೀಚೆಗೆ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ, ಭಾರತವು 2019ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ್ದು, ವರ್ಷದಲ್ಲಿ ಮಹಿಳೆಯರ ವಿರುದ್ಧ ಒಟ್ಟು 4,05,861 ಅಪರಾಧ ಪ್ರಕರಣಗಳು ದಾಖಲಾಗಿದೆ. 2018ಕ್ಕೆ ಹೋಲಿಕೆ ಮಾಡಿದರೆ 2019 ರಲ್ಲಿ ಶೇ 7 ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ತಿಳಿಸಿದೆ.
A 13-year-old girl, set on fire in Telangana last month allegedly after she ignored the sexual advances of a 26-year-old man at his house where she worked as a caretaker, died today at a hospital in Hyderabad.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm