ಬ್ರೇಕಿಂಗ್ ನ್ಯೂಸ್
21-01-23 05:13 pm HK News Desk ಕ್ರೈಂ
ಮಹಾರಾಷ್ಟ್ರ, ಜ.21 : ಗರ್ಭಿಣಿಯಾಗಲು ಮಹಿಳೆಯೊಬ್ಬರಿಗೆ ಪುಡಿಮಾಡಿದ ಮಾನವನ ಮೂಳೆಗಳನ್ನು ತಿನ್ನುವಂತೆ ಆಕೆಯ ಪತಿ ಹಾಗೂ ಅತ್ತೆ ಒತ್ತಾಯಿಸಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಸಂತ್ರಸ್ತೆ ನೀಡಿದ ಎರಡು ಪ್ರತ್ಯೇಕ ದೂರಿನನ್ವಯ ಪುಣೆ ಪೊಲೀಸರು ಆಕೆಯ ಪತಿ, ಅತ್ತೆ –ಮಾವ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
7 ಮಂದಿ ಆರೋಪಿಗಳ ವಿರುದ್ಧ ಮೂಢನಂಬಿಕೆ ವಿರೋಧಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 498 ಎ, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆ ನಗರದ ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ಮಾಹಿತಿ ನೀಡಿದ್ದಾರೆ.
ಪತಿಯ ಕುಟುಂಬದವರು ಮದುವೆಯಾದ ಆರಂಭದ ದಿನಗಳಲ್ಲಿ ತವರು ಮನೆಯಿಂದ ನಗದು, ಚಿನ್ನದ ಆಭರಣಗಳನ್ನು ತರುವಂತೆ ಒತ್ತಾಯಿಸಿ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾರೆ.
ಮೂಢನಂಬಿಕೆಗಳಿಂದ ಪ್ರಭಾವಿತರಾಗಿದ್ದ ಪತಿ ಹಾಗೂ ಅತ್ತೆ ಮಾಟಗಾರರ ಸಲಹೆ ಕೇಳುತ್ತಿದ್ದರು. ಅಲ್ಲದೆ ಅಮಾವಾಸ್ಯೆ ಬಂತೆದರೆ ಅನೇಕ ಮೂಢನಂಬಿಕೆಯ ಆಚರಣೆಗಳನ್ನು ಮಾಡಲು ಒತ್ತಾಯಿಸುತ್ತಿದ್ದರು. ಅಷ್ಟೇ ಅಲ್ಲದೇ ರಾತ್ರಿ ವೇಳೆ ಸ್ಮಶಾನಕ್ಕೆ ಕಳುಹಿಸುವುದು ಜೊತೆಗೆ ಸತ್ತ ಮಾನವರ ಮೂಳೆಗಳನ್ನು ತಿನ್ನಲು ಬಲವಂತ ಮಾಡುತ್ತಿದ್ದರು ಎಂಬ ಸಂತ್ರಸ್ತೆ ಮತ್ತೊಂದು ದೂರು ದಾಖಲಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಎಸಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
In a shocking incident, a woman was allegedly forced by her in-laws and husband to eat powdered human bones as a part of a black magic ritual advised by the local occultist to conceive a child. Following a complaint by the woman, Pune Police on Wednesday registered an FIR or police case against seven people including the husband, in-laws and the occultist.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm