ಬ್ರೇಕಿಂಗ್ ನ್ಯೂಸ್
28-01-23 03:19 pm Mangalore Correspondent ಕ್ರೈಂ
ಮಂಗಳೂರು, ಜ.28 : ನರರೋಗದಿಂದ ಬಳಲುತ್ತಿದ್ದ ಕಾರಣ ಮಲಗಿದಲ್ಲೇ ಇದ್ದ ತನ್ನ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ಆತ್ಮಹತ್ಯೆಗೈದ ಘಟನೆ ಮಂಗಳೂರು ನಗರದ ಕಾಪಿಕಾಡ್ ನಲ್ಲಿ ನಡೆದಿದೆ.
ಶೈಲಜಾ (64) ಕೊಲೆಗೀಡಾದ ಮಹಿಳೆ. ಅವರ ಪತಿ ದಿನೇಶ್ ರಾವ್ (65) ಆತ್ಮಹತ್ಯೆ ಮಾಡಿಕೊಂಡವರು. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು. ಪತ್ನಿ ಶೈಲಜಾ ಐದಾರು ವರ್ಷಗಳಿಂದ ಮಲಗಿದಲ್ಲೇ ಇದ್ದರು. ರಾತ್ರಿ ಮತ್ತು ಹಗಲಿನಲ್ಲಿ ಪ್ರತ್ಯೇಕವಾಗಿ ಹೋಮ್ ನರ್ಸ್ ಇರುತ್ತಿದ್ದರು. ರಾತ್ರಿ ಬಂದಿದ್ದ ಹೋಮ್ ನರ್ಸ್ ಬೆಳಗ್ಗೆ 6.30ಕ್ಕೆ ಹಿಂತಿರುಗಿದ್ದರು. ಆನಂತರ, 8.30ರ ವೇಳೆಗೆ ಮತ್ತೊಬ್ಬ ಹೋಮ್ ನರ್ಸ್ ಬಂದಿದ್ದಾಗ ಮನೆಯ ಬಾಗಿಲು ಹಾಕಲಾಗಿತ್ತು. ಬಳಿಕ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ.





ಬೆಳಗ್ಗಿನ ಹೊತ್ತಲ್ಲಿ ಪತ್ನಿಯನ್ನು ಉಸಿರು ಕಟ್ಟಿಸಿ ಕೊಲೆಗೈದು ಪತಿ ದಿನೇಶ ರಾವ್ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರಿಗೆ ಇಬ್ಬರು ಹೆಣ್ಮಕ್ಕಳಿದ್ದು ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ ದಿನೇಶ್ ರಾವ್, ಪತ್ನಿಯ ಸ್ಥಿತಿಯಿಂದಾಗಿ ಖಿನ್ನರಾಗಿದ್ದರು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
Murder, Husband kills sleeping wife later commits suicide at house at Kapikad in Mangalore. The deceased have been identified as Shilaja (64) and Dinesh Rao (65). Wife was suffering from illness and was bedridden for five years. Their two daughters are said to be settled in the United States.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm