ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm