ಬ್ರೇಕಿಂಗ್ ನ್ಯೂಸ್
03-02-23 11:38 pm Mangaluru Correspondent ಕ್ರೈಂ
ಮಂಗಳೂರು, ಫೆ.3: ಧೂಳೆಬ್ಬಿಸಿಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿದ ವ್ಯಕ್ತಿಯನ್ನು ಟಿಪ್ಪರ್ ಹಾಯಿಸಿ ಚಾಲಕನೇ ಕೊಲೆಗೈದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ. ಕೋಟೆಬಾಗಿಲು ನಿವಾಸಿ ಫಯಾಜ್ (63) ಕೊಲೆಯಾದವರು.
ಶುಕ್ರವಾರ ಮಧ್ಯಾಹ್ನ ಮಸೀದಿಗೆ ತೆರಳುತ್ತಿದ್ದಾಗ ಟಿಪ್ಪರ್ ಚಾಲಕ ಹ್ಯಾರಿಸ್ ಬಳಿ ಧೂಳು ಎಬ್ಬಿಸಿಕೊಂಡು ಸಾಗುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದ್ದರು. ಶಾಲಾ ಮಕ್ಕಳು ಹೋಗುವ ದಾರಿ, ಈ ರೀತಿ ಯಾಕೆ ಹೋಗುತ್ತೀಯಾ ಎಂದು ಕೇಳಿದ್ದರು. ಅದಕ್ಕೆ ಹ್ಯಾರಿಸ್, ನೀನು ಯಾರು ಕೇಳಲು ಎಂದು ಮರು ಪ್ರಶ್ನೆ ಮಾಡಿದ್ದು ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಆನಂತರ ಮಸೀದಿಯಿಂದ ಮರಳುತ್ತಿದ್ದಾಗ ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ಆಗಿದೆ. ಟಿಪ್ಪರ್ ಬಾಗಿಲಿನ ಬಳಿ ಹತ್ತಿ ನಿಂತಿದ್ದ ಫಯಾಜ್ ಮೇಲೆ ರಾಡಿನಿಂದ ಹ್ಯಾರಿಸ್ ಹಲ್ಲೆ ಮಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಫಯಾಜ್ ಬಾಗಿಲು ತೆಗೆದು ಒಳಗೆ ನುಗ್ಗಲು ಯತ್ನಿಸಿದ್ದು ಇದೇ ವೇಳೆ ಹ್ಯಾರಿಸ್ ಟಿಪ್ಪರ್ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಬಾಗಿಲಿನಲ್ಲಿ ನೇತಾಡಿಕೊಂಡಿದ್ದ ಫಯಾಜ್ ಕೆಳಕ್ಕೆ ಬಿದ್ದಿದ್ದು ಅದೇ ಟಿಪ್ಪರಿನ ಹಿಂದಿನ ಚಕ್ರ ಫಯಾಜ್ ಕಾಲು, ತೊಡೆಯ ಭಾಗದಿಂದ ಹರಿದು ಹೋಗಿದೆ.
ಕೂಡಲೇ ಫಯಾಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಹ್ಯಾರಿಸ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮೂಡುಬಿದ್ರೆ ಠಾಣೆಯಲ್ಲಿ ಕೊಲೆ ಕೇಸು ದಾಖಲಾಗಿದೆ.
Moodbidri murder man moved down by a tipper truck driver over silly issue. Mangaluru city and Moodbidri town witnessed one each gruesome murder on Friday, February 3, when an unidentified miscreant stabbed a jewellery shop worker to death and a tipper truck driver mowed down an elderly man under the wheels of his vehicle, respectively.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm