ಬ್ರೇಕಿಂಗ್ ನ್ಯೂಸ್
10-02-23 01:53 pm HK News Desk ಕ್ರೈಂ
ಕಲಬುರ್ಗಿ, ಫೆ.10 : ಪಿಎಸ್ಐ ಹಾಗು ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಮಾಸುವ ಮುನ್ನವೇ ಮಗದೊಂದು ಪರೀಕ್ಷೆಯ ಗೋಲ್ಮಾಲ್ ಬೆಳಕಿಗೆ ಬಂದಿದೆ. ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಪಾಸ್ ಮಾಡಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಬಹಿರಂಗವಾಗಿದೆ.
ಕೆಕೆಆರ್ಟಿಸಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ಗಿಟ್ಟಿಸಲು ಅಭ್ಯರ್ಥಿಗಳು ಕಬ್ಬಿಣ ಹೊತ್ತು ಬಂದಿದ್ದರು. ಹೇಗಾದರೂ ಮಾಡಿ ಕೆಲಸ ಗಿಟ್ಟಿಸಲೇಬೇಕೆಂದು ಅಡ್ಡದಾರಿ ಹಿಡಿದಿದ್ದ ಅಭ್ಯರ್ಥಿಗಳ ಅಕ್ರಮವನ್ನು ಜಾಗೃತ ದಳದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ)ಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ 55 ಕೆ.ಜಿ. ತೂಕ ಕಡ್ಡಾಯವಾಗಿದೆ. ಹೀಗಾಗಿ ಕೆಲ ಅಭ್ಯರ್ಥಿಗಳು ತೂಕ ಹೆಚ್ಚಳಕ್ಕಾಗಿ ವಿನೂತನ ಮಾರ್ಗ ಅನುಸರಿಸಿ ಇದೀಗ ಸಿಕ್ಕಿಬಿದ್ದಿದ್ದಾರೆ.
ಒಳಉಡುಪುಗಳಲ್ಲಿ ಭಾರವಾದ ಕಬ್ಬಿಣದ ರಾಡ್ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಇಟ್ಟುಕೊಂಡು ಬಂದು ಕಣ್ಣಿಗೆ ಮಣ್ಣೆರಚಲು ಅಭ್ಯರ್ಥಿಗಳು ಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಜಾಗೃತ ದಳದ ಅಧಿಕಾರಿಗಳಿಂದ ವಿಫಲವಾಗಿದೆ. ಒಳಉಡುಪಿನಲ್ಲಿ 5 ರಿಂದ 10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಹಲವು ಗಂಟೆಗಳ ಕಾಲ ಇಟ್ಟುಕೊಂಡಿದ್ದರು ಎಂಬ ಸಂಗತಿ ಬಯಲಾಗಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Kkrtc fraud in Kalaburgi, 4 held for cheating physical fitness test of Bus Conductor job.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm