ಬ್ರೇಕಿಂಗ್ ನ್ಯೂಸ್
04-08-20 03:37 pm Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ವಿರುದ್ಧ ಪಾಟ್ನಾ ಪೊಲೀಸರು 48 ಪುಟಗಳ ಸಾಕ್ಷಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.
ಸುಶಾಂತ್ ನಿಧನದ ಬಳಿಕ ಅಜ್ಞಾತ ಸ್ಥಳದಲ್ಲಿರುವ ರಿಯಾ ಚಕ್ರವರ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ವಿಡಿಯೋ ಮೂಲಕ ರಿಯಾ ಚಕ್ರವರ್ತಿ ಸಂದೇಶ ರವಾನಿಸಿದ್ದರು. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಸುಶಾಂತ್ ತಂದೆ ಕೆ.ಕೆ.ಸಿಂಗ್ ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ಮತ್ತು ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಾಟ್ನಾ ಪೊಲೀಸರು ರಿಯಾ ಬಂಧನಕ್ಕಾಗಿ ಸಾಕ್ಷಿ ಸಂಗ್ರಹಿಸುತ್ತಿದ್ದಾರೆ.
ಈಗಾಗಲೇ ಪಾಟ್ನಾ ಪೊಲೀಸರು 48 ಪುಟಗಳಷ್ಟು ಸಾಕ್ಷಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈ 48 ಪುಟಗಳಲ್ಲಿ ರಿಯಾ ಮತ್ತು ಸುಶಾಂತ್ ನಡುವೆ ನಡೆದ ಬ್ಯಾಂಕ್ ವ್ಯವಹಾರಗಳ ಮಾಹಿತಿ ಇದೆ. 13 ಪುಟಗಳಲ್ಲಿ ಸುಶಾಂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ಜೊತೆ ವಾಟ್ಸಪ್ ಸಂದೇಶಗಳ ಸ್ಕ್ರೀನ್ ಶಾಟ್, ಆರು ಜನರ ಹೇಳಿಕೆಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯ ಟೆಲಿಫೋನ್ ಹೇಳಿಕೆ ಸಹ ಈ ಪುಟಗಳಲ್ಲಿದೆ ಎಂದು ಪ್ರಕಟವಾಗಿದೆ.
ಈ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ರಿಯಾ ಚಕ್ರವರ್ತಿಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸುವಂತೆ ಪೊಲೀಸರು ಮನವಿ ಮಾಡಿಕೊಳ್ಳಲಿದ್ದಾರೆ. ಸುಶಾಂತ್ ಹೊಂದಿದ್ದ ಮೂರು ಬ್ಯಾಂಕ್ ಖಾತೆಗಳ ಮಾಹಿತಿ, ಯುಪಿಐ ಪೇಮೆಂಟ್, ಸ್ಟೇಟ್ಮೆಂಟ್ ಮತ್ತು ಚಾರ್ಟೆಡ್ ಅಕೌಂಟೆಂಟ್ ಲೇಜರ್ ಬ್ಯಾಲೆನ್ಸ್ ಕಾಪಿಯನ್ನು ಸಹ ಪೊಲೀಸರು ತರಿಸಿಕೊಂಡಿದ್ದಾರೆ.
ಸುಶಾಂತ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಮತ್ತು ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am