ಬ್ರೇಕಿಂಗ್ ನ್ಯೂಸ್
11-02-23 08:09 pm HK News Desk ಕ್ರೈಂ
ಹಾಸನ,ಫೆ.11 : ಹಾಸನ ಜಿಲ್ಲೆ ಅರಸೀಕೆರೆ ನಗರದ ಶ್ರೀನಗರ ಸಮೀಪದ ರೈಲ್ವೆ ಟ್ರ್ಯಾಕ್ ಸಮೀಪ 25 ವರ್ಷದ ಯುವಕನೊಬ್ಬನ್ನು ಕೊಂದು ಮೃತದೇಹವನ್ನು ಸುಟ್ಟು ಹಾಕಲಾಗಿದೆ.
ಜನವಸತಿ ಸಮೀಪವೇ, ರೈಲ್ವೆ ಟ್ರ್ಯಾಕ್ ಬಳಿ ಈ ಭೀಕರ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಶನಿವಾರ ಬೆಳಗ್ಗೆ ಇಲ್ಲಿನ ರೈಲ್ವೇ ಟ್ರ್ಯಾಕ್ ಬಳಿ ಬೆಂಕಿ ಹೊತ್ತು ಉರಿಯುವುದನ್ನು ಗಮನಿಸಿದ ಸ್ಥಳೀಯರು ಹೋಗಿ ನೋಡಿದಾಗ ಅದೊಂದು ಶವ ಎನ್ನುವುದು ಗೊತ್ತಾಗಿದೆ. ರಾತ್ರಿ ಕೊಲೆ ಮಾಡಿ ಬೆಳಗ್ಗಿನ ಜಾವ ಇಲ್ಲಿಗೆ ತಂದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ಅಥವಾ ಕೆಲವು ದಿನಗಳ ಹಿಂದೆ ಕೊಂದು, ಶವವನ್ನು ಕಟ್ಟಿ ಇಟ್ಟುಕೊಂಡು ರಾತ್ರಿ ಇಲ್ಲಿಗೆ ತಂದು ಸುಟ್ಟಿರುವ ಸಾಧ್ಯತೆಯೂ ಇದೆ.
ಅಂದಾಜು 25 ವರ್ಷ ಪ್ರಾಯದ ಯುವಕನ ಶವ ಇದಾಗಿದ್ದು, ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಅರಸೀಕೆರೆ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಗುರುತು ಪತ್ತೆಗೆ ಮುಂದಾದ ಪೊಲೀಸರು ಸಾರ್ವಜನಿಕರಿಂದ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಜತೆಗೆ ನಾಪತ್ತೆಯಾಗಿರುವ ವ್ಯಕ್ತಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ ಕೇಳಿಬಂದಿದ್ದು, ಪೊಲೀಸರು ಕೂಡಾ ಅದೇ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
Hassan a 25 year old murdered, body gutted in fire.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm