ಬ್ರೇಕಿಂಗ್ ನ್ಯೂಸ್
18-02-23 10:55 am HK News Desk ಕ್ರೈಂ
ರಾಮನಗರ, ಫೆ.18: ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ.
ಆ್ಯಸಿಡ್ ದಾಳಿಯಲ್ಲಿ ಅಪ್ರಾಪ್ತೆಯ ಕಣ್ಣಿಗೆ ಗಾಯಗಳಾಗಿದ್ದು, ಕೂಡಲೇ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕುರುಪೇಟೆಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 22 ವರ್ಷ ವಯಸ್ಸಿನ ಆರೋಪಿ ಯುವಕ, ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಸಾಮಾಜಿಕ ಮಾಧ್ಯಮದ ಮೂಲಕ ಇಬ್ಬರು ಪರಿಚಿತರಾಗಿದ್ದರು. ಈ ವೇಳೆ ಯುವಕ ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ನಿರಾಕರಿಸಿದ್ದ ಬಾಲಕಿ, ಇತ್ತೀಚೆಗಷ್ಟೇ ಮಾತನಾಡುವುದನ್ನು ನಿಲ್ಲಿಸಿದ್ದಳು.
ಈ ವಿಚಾರವಾಗಿ ಸಿಟ್ಟಿಗೆದ್ದಿದ್ದ ಯುವಕ, ಬಾಲಕಿಗೆ ಕರೆ ಮಾಡಿ ಮಾತನಾಡಲು ಬೈಪಾಸ್ ರಸ್ತೆಗೆ ಬರಬೇಕೆಂದು ಕೇಳಿದ್ದಾನೆ. ಅದರಂತೆ ಬಾಲಕಿ ತನ್ನ ತಮ್ಮನ ಜೊತೆ ತೆರಳಿ ಆತನನ್ನು ಭೇಟಿಯಾಗುತ್ತಾಳೆ. ಈ ವೇಳೆ ಯುವಕ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ. ಆಗಲೂ ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಮುಖದ ಮೇಲೆ ಎರಚಿದ್ದಾನೆ.
ಕನಕಪುರ ನಗರ ನಿವಾಸಿಯಾಗಿರುವ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು (22) ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ್ಯಸಿಡ್ ದಾಳಿಯಿಂದ ಅಪ್ರಾಪ್ತ ಯುವತಿಯ ಮುಖಕ್ಕೆ ಗಾಯ ಹಾಗೂ ಎಡ ಭಾಗದ ಕಣ್ಣಿಗೆ ಗಾಯವಾಗಿದೆ. ಸಂತ್ರಸ್ತೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿದೆ.
ಸದ್ಯ ರಾಜ್ಯ ಮಹಿಳಾ ಆಯೋಗವು ರಾಮನಗರ ಎಸ್ಪಿಗೆ ಕರೆ ಮಾಡಿದ್ದು, ಅಪ್ರಾಪ್ತ ಯುವತಿಯ ಮೇಲೆ ಆ್ಯಸಿಡ್ ದಾಳಿ ವಿಚಾರದ ಮಾಹಿತಿ ಪಡೆದಿದ್ದಾರೆ. ಜೊತೆಗೆ ದಾಳಿ ಮಾಡಿರೋ ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಇಂದು ಯುವತಿಯನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಾಡಲಿದ್ದಾರೆ. ಇನ್ನು ಕನಕಪುರ ನಗರ ಠಾಣೆಯಲ್ಲಿ ಪೊಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಆ್ಯಸಿಡ್ ದಾಳಿಕೋರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Acid attack on minor girl in ramnagara for refusing love. The girl is said to be hospitalised. Search for the accused is in full swing by the police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm