ಬ್ರೇಕಿಂಗ್ ನ್ಯೂಸ್
18-02-23 10:55 am HK News Desk ಕ್ರೈಂ
ರಾಮನಗರ, ಫೆ.18: ಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ.
ಆ್ಯಸಿಡ್ ದಾಳಿಯಲ್ಲಿ ಅಪ್ರಾಪ್ತೆಯ ಕಣ್ಣಿಗೆ ಗಾಯಗಳಾಗಿದ್ದು, ಕೂಡಲೇ ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಕುರುಪೇಟೆಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ 22 ವರ್ಷ ವಯಸ್ಸಿನ ಆರೋಪಿ ಯುವಕ, ಮತ್ತು ವಿದ್ಯಾರ್ಥಿನಿ ನಡುವೆ ಕಳೆದ ಒಂದು ವರ್ಷದಿಂದಲೂ ಸಲುಗೆ ಇತ್ತು. ಸಾಮಾಜಿಕ ಮಾಧ್ಯಮದ ಮೂಲಕ ಇಬ್ಬರು ಪರಿಚಿತರಾಗಿದ್ದರು. ಈ ವೇಳೆ ಯುವಕ ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ನಿರಾಕರಿಸಿದ್ದ ಬಾಲಕಿ, ಇತ್ತೀಚೆಗಷ್ಟೇ ಮಾತನಾಡುವುದನ್ನು ನಿಲ್ಲಿಸಿದ್ದಳು.
ಈ ವಿಚಾರವಾಗಿ ಸಿಟ್ಟಿಗೆದ್ದಿದ್ದ ಯುವಕ, ಬಾಲಕಿಗೆ ಕರೆ ಮಾಡಿ ಮಾತನಾಡಲು ಬೈಪಾಸ್ ರಸ್ತೆಗೆ ಬರಬೇಕೆಂದು ಕೇಳಿದ್ದಾನೆ. ಅದರಂತೆ ಬಾಲಕಿ ತನ್ನ ತಮ್ಮನ ಜೊತೆ ತೆರಳಿ ಆತನನ್ನು ಭೇಟಿಯಾಗುತ್ತಾಳೆ. ಈ ವೇಳೆ ಯುವಕ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ. ಆಗಲೂ ಆಕೆ ಒಪ್ಪದಿದ್ದಾಗ ಕಾರ್ ಎಂಜಿನ್ ಶುಚಿಗೊಳಿಸಲು ಬಳಸುತ್ತಿದ್ದ ಆ್ಯಸಿಡ್ ಅನ್ನು ಮುಖದ ಮೇಲೆ ಎರಚಿದ್ದಾನೆ.
ಕನಕಪುರ ನಗರ ನಿವಾಸಿಯಾಗಿರುವ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು (22) ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆ್ಯಸಿಡ್ ದಾಳಿಯಿಂದ ಅಪ್ರಾಪ್ತ ಯುವತಿಯ ಮುಖಕ್ಕೆ ಗಾಯ ಹಾಗೂ ಎಡ ಭಾಗದ ಕಣ್ಣಿಗೆ ಗಾಯವಾಗಿದೆ. ಸಂತ್ರಸ್ತೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ಯುವತಿಯನ್ನು ದಾಖಲು ಮಾಡಲಾಗಿದೆ.
ಸದ್ಯ ರಾಜ್ಯ ಮಹಿಳಾ ಆಯೋಗವು ರಾಮನಗರ ಎಸ್ಪಿಗೆ ಕರೆ ಮಾಡಿದ್ದು, ಅಪ್ರಾಪ್ತ ಯುವತಿಯ ಮೇಲೆ ಆ್ಯಸಿಡ್ ದಾಳಿ ವಿಚಾರದ ಮಾಹಿತಿ ಪಡೆದಿದ್ದಾರೆ. ಜೊತೆಗೆ ದಾಳಿ ಮಾಡಿರೋ ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಇಂದು ಯುವತಿಯನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಾಡಲಿದ್ದಾರೆ. ಇನ್ನು ಕನಕಪುರ ನಗರ ಠಾಣೆಯಲ್ಲಿ ಪೊಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಆ್ಯಸಿಡ್ ದಾಳಿಕೋರನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Acid attack on minor girl in ramnagara for refusing love. The girl is said to be hospitalised. Search for the accused is in full swing by the police.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm