ಬ್ರೇಕಿಂಗ್ ನ್ಯೂಸ್
19-02-23 12:06 pm Bangalore Correspondent ಕ್ರೈಂ
ಬೆಂಗಳೂರು, ಫೆ.19: ತನ್ನ ಪ್ರೇಮ ನಿವೇದನೆಯನ್ನು ಒಪ್ಪಿಕೊಳ್ಳದ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಯುವಕನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ನಗರದ ಕುರುಪೇಟೆ ನಿವಾಸಿ, ಸಾತನೂರು ರಸ್ತೆ ಹೆಂಚಿನ ಫ್ಯಾಕ್ಟರಿ ಮುಂಭಾಗ ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಸುಮಂತ್ ಅಲಿಯಾಸ್ ಅಪ್ಪು (22) ಬಂಧಿತ ಆರೋಪಿಯಾಗಿದ್ದಾನೆ.
ಆ್ಯಸಿಡ್ ದಾಳಿಯಿಂದ ಬಾಲಕಿ ಶೇ.40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾಳೆ. ಪಿಯುಸಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಬೆನ್ನು, ಎಡಗಣ್ಣು, ಭುಜದ ಮೇಲಿನ ಗಾಯಗಳಿಂದ ಬಳಲುತ್ತಿದ್ದು, ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆರೋಪಿ ನಗರದ ಹೊರವಲಯದ ಸಾತನೂರು ರಸ್ತೆಯಲ್ಲಿ ತೆರಳುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿ ಶುಕ್ರವಾರ ಬೆಳಿಗ್ಗೆ ಸಂತ್ರಸ್ತೆ ಮನೆಗೆ ಕಲ್ಲು ಎಸೆದಿದ್ದ. ತನ್ನಿಂದ ದೂರ ಇರಬೇಕು ಎಂದರೆ ಕನಿಷ್ಟ ಕಾಲಿಗೆ ಬಿದ್ದು ಬೇಡಿಕೊಳ್ಳುವಂತೆ ತಿಳಿಸಿದ್ದ. ಬಳಿಕ ಬಾಲಕಿ ತನ್ನ ಸಹೋದರನೊಂದಿಗೆ ನಾರಾಯಣಪ್ಪ ಕೆರೆ ಬಳಿ ಇರುವ ಬೈಪಾಸ್ ರಸ್ತೆಗೆ ತೆರಳಿ ಆರೋಪಿ ಕಾಲಿಗೆ ಬಿದ್ದಿದ್ದಾಳೆ. ಈ ವೇಳೆ ಆರೋಪಿ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿದ್ದ ಸಹೋದರ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾನೆ. ಸುಮಂತ್ ಬಾಲಕಿ ಹಿಂದೆ ಬಿದ್ದಿರುವುದು ಎರಡೂ ಕುಟುಂಬಕ್ಕೆ ತಿಳಿದಿತ್ತು. ಆದರೆ, ಜಾತಿಗಳು ಬೇರೆಯಾಗಿದ್ದರಿಂದ ಮೌನ ತಾಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ನಡುವೆ ಬಾಲಕಿಯ ಆರೋಗ್ಯ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಅಧೀಕ್ಷಕಿ ಮತ್ತು ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಅವರು, ಹೊರರೋಗಿಗಳ ವಿಭಾಗದಲ್ಲಿ ಬಾಲಕಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ. ಆಕೆ ಭಾಗಶಃ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ಶನಿವಾರ ಬೆಳಗ್ಗೆ ಆಸ್ಪತ್ರೆ ಭೇಟಿ ನೀಡಿದ್ದು, ಬಾಲಕಿಯ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆ ಅಗತ್ಯವಿರುವ ನೆರವನ್ನುನೀಡುವುದಾಗಿ ಭರವಸೆ ನೀಡಿದರು.
ಆಸಿಡ್ನಲ್ಲಿನ ರಾಸಾಯನಿಕ ಅಂಶಗಳ ಬಗ್ಗೆ ಖಚಿತಪಡಿಸಿಕೊಳ್ಳಲು ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಗಾಗಿ ಕಾಯುತ್ತಿದ್ದಾರೆ. ಆರೋಪಿ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಕಂಡಿರುವ ಕನಕಪುರ ನಗರ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Acid attack on minor girl in Bangalore, accused arrested. In the Ramanagara region of Karnataka, a guy has been detained for attacking a young girl with acid and severely hurting her. On February 17, in Kanakapura, a teenager wounded a woman's eye by hurling "acid" at her. The defendant, Sumanth, is a Kurupete resident and a mechanic who works at a business. He is 22 years old. The man was held captive.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm