ಬ್ರೇಕಿಂಗ್ ನ್ಯೂಸ್
20-02-23 10:25 pm Mangalore Correspondent ಕ್ರೈಂ
ಪುತ್ತೂರು, ಫೆ.20 : ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆಗೈದು ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದೆ.
ಈ ಬಗ್ಗೆ ಸಂತ್ರಸ್ತ ಮಹಿಳಾ ಕಂಡಕ್ಟರ್ ಪುತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಮಧ್ಯಾಹ್ನ ಪುತ್ತೂರಿನಿಂದ ಮಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ ಕಿಕ್ಕಿರಿದು ತುಂಬುವಷ್ಟು ಪ್ರಯಾಣಿಕರಿದ್ದರು. ಈ ವೇಳೆ, ಬಸ್ಸಿಗೆ ಅಂಗವಿಕಲ ವ್ಯಕ್ತಿಯೊಬ್ಬರು ಹತ್ತಿದ್ದು ಕಂಡಕ್ಟರ್ ಆಗಿದ್ದ ಮಹಿಳೆ ಅಂಗವಿಕಲ ವ್ಯಕ್ತಿಗಳಿಗೆ ಮೀಸಲಾಗಿರುವ ಸೀಟು ಬಿಟ್ಟು ಕೊಡುವಂತೆ ಪ್ರಯಾಣಿಕನಿಗೆ ಹೇಳಿದ್ದಾರೆ.
ಇದರಿಂದ ಸಿಟ್ಟುಗೊಂಡ ಪ್ರಯಾಣಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕಂಡಕ್ಟರ್ ಮಹಿಳೆಯ ಕಾಲರ್ ಹಿಡಿದು ಎಳೆದಿದ್ದಾನೆ. ಅಲ್ಲದೆ, ಹಲ್ಲೆಗೆ ಮುಂದಾಗಿದ್ದು ಅಡ್ಡ ಕೈಹಿಡಿದ ಮಹಿಳೆಯ ಕೈಯನ್ನು ಹಿಡಿದು ತಿರುಚಿದ್ದಾರೆ. ಇದಾಗುತ್ತಲೇ ಚಾಲಕ ಬಸ್ ನಿಲ್ಲಿಸಿ ಕಂಡಕ್ಟರ್ ನೆರವಿಗೆ ಬಂದಿದ್ದಾರೆ. ಬಸ್ ಪುತ್ತೂರು ಹೊರವಲಯದ ಪ್ರಗತಿ ಆಸ್ಪತ್ರೆ ಬಳಿ ನಿಲ್ಲುತ್ತಿದ್ದಂತೆ ಆರೋಪಿ ಪ್ರಯಾಣಿಕ ಬಸ್ ಇಳಿದು ಪರಾರಿಯಾಗಿದ್ದಾನೆ.
ಕಂಡಕ್ಟರ್ ಮಹಿಳೆ, ಆರೋಪಿಯ ಬಗ್ಗೆ ಇತರ ಪ್ರಯಾಣಿಕರ ಜೊತೆಗೆ ಮಾತನಾಡಿದ ವೇಳೆ ಆತನ ಹೆಸರು ಹಸನ್ ಮುರ ಎಂದು ಗೊತ್ತಾಗಿದೆ. ಆರೋಪಿಯ ಹೆಸರು ಉಲ್ಲೇಖಿಸಿ ಕಂಡಕ್ಟರ್ ಪುತ್ತೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ತನ್ನ ಕೈ ತಿರುಚಿದ್ದರಿಂದ ಗಾಯಗೊಂಡಿರುವ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೈ ಹಿಡಿದು ಮಹಿಳೆಯ ಮೈಗೆ ಹಾಕಿದ್ದರಿಂದ ಆರೋಪಿ ವಿರುದ್ಧ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ.
In a shocking incident, a woman conductor was allegedly assaulted and abused by a passenger of a KSRTC bus which was on its way from Puttur to The State Bank bus stand in Mangaluru.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm