ಬ್ರೇಕಿಂಗ್ ನ್ಯೂಸ್
24-02-23 01:23 pm Mangalore Correspondent ಕ್ರೈಂ
ಪುತ್ತೂರು, ಫೆ.24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೂರು ದಿನಗಳ ಕಾರ್ಯಾಚರಣೆ ಬಳಿಕ ಗುರುವಾರ ಸಂಜೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಗ್ರಾಮದಲ್ಲಿ ಆನೆ ಸೆರೆಹಿಡಿದು ರಾತ್ರಿ ವೇಳೆ, ಅದನ್ನು ದುಬಾರೆಯ ಆನೆ ಬಿಡಾರಕ್ಕೆ ಕರೆದೊಯ್ದು ಬಿಟ್ಟು ಬರಲು ಮುಂದಾಗಿದ್ದರು. ಆದರೆ ರಾತ್ರಿ 9 ಗಂಟೆ ಸುಮಾರಿಗೆ ಆನೆಯನ್ನು ಲಾರಿಗೆ ಹಾಕಿ ಬೇರೆ ಕಡೆ ಒಯ್ಯಲು ಮುಂದಾದಾಗ ಸ್ಥಳೀಯರು ಅಡ್ಡಗಟ್ಟಿದ್ದು ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.

ಆದರೆ ಅರಣ್ಯ ಸಿಬಂದಿ ಸೆರೆಹಿಡಿದ ಕಾಡಾನೆಯನ್ನು ಇಲ್ಲಿ ಉಳಿಸಿಕೊಳ್ಳುವಂತಿಲ್ಲ. ಇದನ್ನು ಬಿಟ್ಟು ಬಂದು ಬೇರೆ ಕಾಡಾನೆಗಳನ್ನು ಸೆರೆ ಹಿಡಿಯುವುದಾಗಿ ಹೇಳಿದ್ದಕ್ಕೆ ಸ್ಥಳೀಯರು ಕೇಳಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೇರಿದ್ದ ಜನರನ್ನು ದೂರಕ್ಕೆ ಹೋಗುವಂತೆ ಲಾಟಿ ಹಿಡಿದು ಗದರಿದ್ದಾರೆ. ಇದರಿಂದ ರೊಚ್ಚಿಗೆದ್ದ ಒಂದಷ್ಟು ಜನ ಪೊಲೀಸರು ಮತ್ತು ಅರಣ್ಯಾಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪಂಜ ವಲಯದ ಉಪವಲಯ ಅರಣ್ಯಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕಾಡಾನೆ ಸೆರೆ ಬೆನ್ನಲ್ಲೇ ಅರಣ್ಯಾಧಿಕಾರಿಗಳ ವಿರುದ್ಧ ತಿರುಗಿದ ಸ್ಥಳೀಯರ ಆಕ್ರೋಶ ; ಕಲ್ಲು ತೂರಾಟ, ಪೊಲೀಸರ ವಾಹನ ಜಖಂ
Kadaba Villagers pelt stones at forest authorities after elephants capture seven arrested.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm