ಬ್ರೇಕಿಂಗ್ ನ್ಯೂಸ್
24-02-23 01:23 pm Mangalore Correspondent ಕ್ರೈಂ
ಪುತ್ತೂರು, ಫೆ.24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೂರು ದಿನಗಳ ಕಾರ್ಯಾಚರಣೆ ಬಳಿಕ ಗುರುವಾರ ಸಂಜೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಗ್ರಾಮದಲ್ಲಿ ಆನೆ ಸೆರೆಹಿಡಿದು ರಾತ್ರಿ ವೇಳೆ, ಅದನ್ನು ದುಬಾರೆಯ ಆನೆ ಬಿಡಾರಕ್ಕೆ ಕರೆದೊಯ್ದು ಬಿಟ್ಟು ಬರಲು ಮುಂದಾಗಿದ್ದರು. ಆದರೆ ರಾತ್ರಿ 9 ಗಂಟೆ ಸುಮಾರಿಗೆ ಆನೆಯನ್ನು ಲಾರಿಗೆ ಹಾಕಿ ಬೇರೆ ಕಡೆ ಒಯ್ಯಲು ಮುಂದಾದಾಗ ಸ್ಥಳೀಯರು ಅಡ್ಡಗಟ್ಟಿದ್ದು ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.

ಆದರೆ ಅರಣ್ಯ ಸಿಬಂದಿ ಸೆರೆಹಿಡಿದ ಕಾಡಾನೆಯನ್ನು ಇಲ್ಲಿ ಉಳಿಸಿಕೊಳ್ಳುವಂತಿಲ್ಲ. ಇದನ್ನು ಬಿಟ್ಟು ಬಂದು ಬೇರೆ ಕಾಡಾನೆಗಳನ್ನು ಸೆರೆ ಹಿಡಿಯುವುದಾಗಿ ಹೇಳಿದ್ದಕ್ಕೆ ಸ್ಥಳೀಯರು ಕೇಳಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೇರಿದ್ದ ಜನರನ್ನು ದೂರಕ್ಕೆ ಹೋಗುವಂತೆ ಲಾಟಿ ಹಿಡಿದು ಗದರಿದ್ದಾರೆ. ಇದರಿಂದ ರೊಚ್ಚಿಗೆದ್ದ ಒಂದಷ್ಟು ಜನ ಪೊಲೀಸರು ಮತ್ತು ಅರಣ್ಯಾಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪಂಜ ವಲಯದ ಉಪವಲಯ ಅರಣ್ಯಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕಾಡಾನೆ ಸೆರೆ ಬೆನ್ನಲ್ಲೇ ಅರಣ್ಯಾಧಿಕಾರಿಗಳ ವಿರುದ್ಧ ತಿರುಗಿದ ಸ್ಥಳೀಯರ ಆಕ್ರೋಶ ; ಕಲ್ಲು ತೂರಾಟ, ಪೊಲೀಸರ ವಾಹನ ಜಖಂ
Kadaba Villagers pelt stones at forest authorities after elephants capture seven arrested.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm