ಬ್ರೇಕಿಂಗ್ ನ್ಯೂಸ್
24-02-23 01:23 pm Mangalore Correspondent ಕ್ರೈಂ
ಪುತ್ತೂರು, ಫೆ.24: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೂರು ದಿನಗಳ ಕಾರ್ಯಾಚರಣೆ ಬಳಿಕ ಗುರುವಾರ ಸಂಜೆ ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ಗ್ರಾಮದಲ್ಲಿ ಆನೆ ಸೆರೆಹಿಡಿದು ರಾತ್ರಿ ವೇಳೆ, ಅದನ್ನು ದುಬಾರೆಯ ಆನೆ ಬಿಡಾರಕ್ಕೆ ಕರೆದೊಯ್ದು ಬಿಟ್ಟು ಬರಲು ಮುಂದಾಗಿದ್ದರು. ಆದರೆ ರಾತ್ರಿ 9 ಗಂಟೆ ಸುಮಾರಿಗೆ ಆನೆಯನ್ನು ಲಾರಿಗೆ ಹಾಕಿ ಬೇರೆ ಕಡೆ ಒಯ್ಯಲು ಮುಂದಾದಾಗ ಸ್ಥಳೀಯರು ಅಡ್ಡಗಟ್ಟಿದ್ದು ಇಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು ಎಂದು ವಾಗ್ವಾದ ಮಾಡಿದ್ದಾರೆ.

ಆದರೆ ಅರಣ್ಯ ಸಿಬಂದಿ ಸೆರೆಹಿಡಿದ ಕಾಡಾನೆಯನ್ನು ಇಲ್ಲಿ ಉಳಿಸಿಕೊಳ್ಳುವಂತಿಲ್ಲ. ಇದನ್ನು ಬಿಟ್ಟು ಬಂದು ಬೇರೆ ಕಾಡಾನೆಗಳನ್ನು ಸೆರೆ ಹಿಡಿಯುವುದಾಗಿ ಹೇಳಿದ್ದಕ್ಕೆ ಸ್ಥಳೀಯರು ಕೇಳಲಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸೇರಿದ್ದ ಜನರನ್ನು ದೂರಕ್ಕೆ ಹೋಗುವಂತೆ ಲಾಟಿ ಹಿಡಿದು ಗದರಿದ್ದಾರೆ. ಇದರಿಂದ ರೊಚ್ಚಿಗೆದ್ದ ಒಂದಷ್ಟು ಜನ ಪೊಲೀಸರು ಮತ್ತು ಅರಣ್ಯಾಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪಂಜ ವಲಯದ ಉಪವಲಯ ಅರಣ್ಯಾಧಿಕಾರಿ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
ಕಾಡಾನೆ ಸೆರೆ ಬೆನ್ನಲ್ಲೇ ಅರಣ್ಯಾಧಿಕಾರಿಗಳ ವಿರುದ್ಧ ತಿರುಗಿದ ಸ್ಥಳೀಯರ ಆಕ್ರೋಶ ; ಕಲ್ಲು ತೂರಾಟ, ಪೊಲೀಸರ ವಾಹನ ಜಖಂ
Kadaba Villagers pelt stones at forest authorities after elephants capture seven arrested.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm