ಬ್ರೇಕಿಂಗ್ ನ್ಯೂಸ್
25-02-23 09:11 pm HK News Desk ಕ್ರೈಂ
ಇಂದೋರ್, ಫೆ.25 : ತನ್ನನ್ನು ಪಾಸ್ ಮಾಡಿಲ್ಲ, ಅಂಕಪಟ್ಟಿ ನೀಡಿಲ್ಲ ಎಂಬ ಸಿಟ್ಟಿನಲ್ಲಿ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತಾ ಶರ್ಮಾ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿದ 2022ರ ಬ್ಯಾಚಿನ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಬಕೆಟ್ ನಲ್ಲಿ ಪೆಟ್ರೋಲ್ ಸುರಿದಿದ್ದು ಸಿಗರ್ ಲೈಟರ್ ಎಸೆದು ಬೆಂಕಿ ಹಚ್ಚಿದ್ದ. ವಿಮುಕ್ತಾ ಶರ್ಮಾ ದೇಹ ಶೇ. 90ರಷ್ಟು ಸುಟ್ಟು ಹೋಗಿದ್ದರೆ, ಆರೋಪಿಯ ದೇಹಕ್ಕೂ ಸುಟ್ಟ ಗಾಯಗಳಾಗಿದ್ದವು. ಕೂಡಲೇ ಅವರನ್ನು ಇಂದೋರಿನ ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತಾ ಶನಿವಾರ ಮುಂಜಾನೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆಶುತೋಷ್ ಶ್ರೀವಾಸ್ತವ ಕಳೆದ ಸಾಲಿನ ವಿದ್ಯಾರ್ಥಿಯಾಗಿದ್ದು ಏಳನೇ ಸೆಮಿಸ್ಟರ್ ನಲ್ಲಿ ಫೈಲ್ ಆಗಿದ್ದ. ತನ್ನನ್ನು ಬೇಕೆಂದೇ ಫೇಲ್ ಮಾಡಿದ್ದಾರೆಂದು ಕಾಲೇಜಿನ ಇತರೇ ಉಪನ್ಯಾಸಕರಿಗೂ ಹಲ್ಲೆ ಮಾಡಿದ್ದ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಕಾಲೇಜು ಸಿಬಂದಿ ದೂರನ್ನೂ ಕೊಟ್ಟಿದ್ದರು. ಒಬ್ಬ ಸಿಬಂದಿಗೆ ಚೂರಿ ಇರಿತವನ್ನೂ ಮಾಡಿದ್ದ. ಆದರೆ ಆರೋಪಿ ವಿರುದ್ಧ ಪೊಲೀಸರು ಕ್ರಮ ಜರುಗಿಸಿರಲಿಲ್ಲ. ಆತ ಪ್ರಭಾವಿ ಎನ್ನುವ ಕಾರಣಕ್ಕೆ ನಿರ್ಲಕ್ಷ್ಯ ವಹಿಸಿದ್ದರು.
ಇದೀಗ ಅದೇ ಆರೋಪಿ ಕಾಲೇಜು ಪ್ರಿನ್ಸಿಪಾಲ್ ಮೇಲೆಯೇ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಇದರ ಬೆನ್ನಲ್ಲೇ ಕರ್ತವ್ಯ ನಿರ್ಲಕ್ಷ್ಯದ ಆರೋಪದಲ್ಲಿ ಸಿಮ್ರೋಲ್ ಠಾಣೆಯ ಎಎಸ್ಐ ಒಬ್ಬರನ್ನು ಐಜಿಪಿ ರಾಕೇಶ್ ಗುಪ್ತಾ ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕೇಸು ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ. ಪ್ರಾಂಶುಪಾಲೆಯ ಕುಟುಂಬಸ್ಥರು ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಆರೋಪ ಮಾಡಿದ್ದಾರೆ.
Principal of a private Pharma college, who was set on fire by a former student succumbed to injuries on Saturday morning. The shocking incident took place last week when the accused, Ashutosh Shrivastava, 24, allegedly poured petrol and set the principal on fire over a delay in receiving his B. Pharma marksheet.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm