ಬ್ರೇಕಿಂಗ್ ನ್ಯೂಸ್
22-10-20 06:09 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 22: ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ಮರುಳು ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಸರಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇರಾನಿ ಗ್ಯಾಂಗ್ಗೆ ಸೇರಿದ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ ಮಿರ್ಜಾ (32), ಅಕ್ಷಯ್ ಸಂಜಯ್ ಗೋಸಾವಿ (22) ಹಾಗೂ ಶಾರುಖ್ ಬಂದೇನವಾಝ್ ಶೇಖ್ (24) ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ವಯಸ್ಸಾದ ಒಂಟಿ ಮಹಿಳೆಯರು ನಡೆದುಕೊಂಡು ಹೋಗುವಾಗ ಮಾತಿಗೆಳೆದು ನಾವು ಪೊಲೀಸರು, ಮುಂದೆ ಗಲಾಟೆ ನಡೆಯುತ್ತಿದೆ. ನಿಮ್ಮ ಚಿನ್ನಾಭರಣಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ಪಡೆದು ಬ್ಯಾಗಿನಲ್ಲಿ ಹಾಕುವಂತೆ ನಂಬಿಸಿ, ಮೋಸದಿಂದ ಎಗರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಇವರು ನಡೆಸಿದ ಕೃತ್ಯಗಳಲ್ಲಿ ಉಡುಪಿ ನಗರ-1, ಕುಂದಾಪುರ-1, ವಿಜಯಪುರ-4, ಚಿಕ್ಕಮಗಳೂರು-1, ಬಂಟ್ವಾಳ-1 ಹಾಗೂ ಮಂಗಳೂರು ಉರ್ವಾದಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ನಾಲ್ವರು ಆರೋಪಿಗಳನ್ನು ಬಂಧಿಸುವ ವೇಳೆ ಮಂಗಳೂರಿನ ಪ್ರಕರಣದ 12 ಗ್ರಾಂ ತೂಕದ ಚಿನ್ನದ ಚೈನ್ ಸಿಕ್ಕಿದ್ದು ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಹೊಂಡಾ ಶೈನ್ ಬೈಕ್, ಎರಡು ಹೆಲ್ಮೆಟ್ ಹಾಗೂ ನಗದು 5,100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್ ಅವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ವೃತ್ತದ ಸಿಪಿಐ ಮಂಜುನಾಥ, ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜುನಾಥ ಡಿ.ಆರ್. ಹಾಗೂ ಸಿಬ್ಬಂದಿಗಳು ನಡೆಸಿದ್ದರು.
Udupi Police have arrested four members belonging to the infamous Irani gang from the city. The arrested are identified as Zakhir Hussain (26), Kambar Rahim Mirza (32), Akshay Sanjaya Gosavi (22), and Shaharuk Bande Nawaz Sheikh (24).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm