ಬ್ರೇಕಿಂಗ್ ನ್ಯೂಸ್
02-03-23 09:29 pm Bangalore Correspondent ಕ್ರೈಂ
ಬೆಂಗಳೂರು, ಮಾ.2: ಅಪಾರ್ಟ್ಮೆಂಟ್ ಮೇಲೆ 15 ಕೋಟಿ ಸಾಲ ಇದೆಯೆಂದು ಹೇಳಿ ಬ್ಯಾಂಕ್ ಸಿಬಂದಿ ಏಕಾಏಕಿ ನ್ಯಾಯಾಲಯದ ಆದೇಶದ ನೆಪದಲ್ಲಿ 29 ಮನೆಗಳನ್ನು ಸೀಜ್ ಮಾಡಿ, ನೂರಕ್ಕೂ ಹೆಚ್ಚು ಮಂದಿಯನ್ನು ಬೀದಿಗೆ ತಳ್ಳಿದ ಘಟನೆ ರಾಜಾಜಿನಗರದಲ್ಲಿ ನಡೆದಿದೆ.
ರಾಜಾಜಿನಗರದ ಶಿವನಹಳ್ಳಿಯ ಐಶ್ವರ್ಯ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ. ಶಿವಣ್ಣ ಎಂಬವರಿಗೆ ಸೇರಿದ ಅಪಾರ್ಟ್ಮೆಂಟ್ ಇದಾಗಿದ್ದು, ಬ್ಯಾಂಕ್ ಸಾಲ ಮರುಪಾವತಿ ಮಾಡಿಲ್ಲವೆಂದು ಅಲ್ಲಿರುವ ಮನೆಗಳನ್ನು ಜಪ್ತಿ ಮಾಡಿದ್ದಾರೆ. ಇದರಿಂದ 25 ವರ್ಷಗಳಿಂದ ಮನೆಗಳನ್ನು ಲೀಸ್ ಪಡೆದಿದ್ದವರು ಶಾಕ್ ಆಗಿದ್ದಾರೆ. 29 ಮನೆಗಳ ಸಂಸಾರವನ್ನು ಏಕಾಏಕಿ ಬ್ಯಾಂಕ್ ಸಿಬಂದಿ ಮತ್ತು ಜೊತೆಗೆ ಬಂದಿದ್ದ ಮೂರನೇ ವ್ಯಕ್ತಿಗಳು ದೌರ್ಜನ್ಯ ನಡೆಸಿ ಬೀದಿಗೆ ತಳ್ಳಿದ್ದಾರೆ. ಮನೆಮಂದಿ ಕೂಡಲೇ ಮನೆ ಖಾಲಿ ಮಾಡಬೇಕೆಂದು ಹೇಳಿ ದೌರ್ಜನ್ಯ ಎಸಗಿದ್ದಾರೆ.

ಅಪಾರ್ಟ್ಮೆಂಟ್ ಹೆಸರಲ್ಲಿ ಕೆನರಾ ಬ್ಯಾಂಕ್ ನಿಂದ 15 ಕೋಟಿ ಸಾಲ ಪಡೆದಿದ್ದಾರೆ ಎನ್ನಲಾಗುತ್ತಿದೆ. ಬಹುತೇಕ ಎಲ್ಲ ಕುಟುಂಬದವರು ಮನೆಗಳನ್ನು ಲೀಸ್ ಮೇಲೆ ಪಡೆದಿದ್ದು, ಈಗ ಏಕಾಏಕಿ ಎದ್ದು ಹೋಗಿ ಅಂದರೆ ಎಲ್ಲಿ ಹೋಗುವುದು ಎಂದು ಕಂಗಾಲಾಗಿದ್ದಾರೆ. ಮಾಲೀಕರು ಮಾಡಿದ ದೋಖಾಗೆ ಮನೆಗಳನ್ನು ಭೋಗ್ಯಕ್ಕೆ ಪಡೆದವರು ಈಗ ಸಿಕ್ಕಿಬೀಳುವಂತಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
25 ವರ್ಷಗಳಿಂದ ನಾವು ಮನೆಯಲ್ಲಿದ್ದೀವಿ, ಇದುವರೆಗೂ ಸಾಲದ ಬಗ್ಗೆ ನಮಗೆ ಗೊತ್ತಿಲ್ಲ, ಇಬ್ಬರು ಬ್ಯಾಂಕ್ ಸಿಬಂದಿ, ಥರ್ಡ್ ಪಾರ್ಟಿಯವರನ್ನು ಕರೆಸ್ಕೊಂಡು ಬಂದು ಮನೆ ಒಳಗಡೆ ನುಗ್ಗಿ ದಾಂಧಲೆ ನಡೆಸಿದ್ದಾರೆ, ಅಮ್ಮನ ಮೇಲೆ ಕಾಲಲ್ಲಿ ಒದ್ದಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಮಧ್ಯಾಹ್ನ ಹೊತ್ತಲ್ಲಿ ಬಂದು ದಾಂಧಲೆ ನಡೆಸಿದರೆ ಹೇಗೆ ಎಂದು ಮಾದೇಶ್ ಎಂಬವರು ಸುದ್ದಿ ವಾಹಿನಿಯ ಜೊತೆಗೆ ಅಲವತ್ತುಕೊಂಡಿದ್ದಾರೆ.
Big scam, 15 crore loan in the name of Aishwarya Apartment in Bengaluru, 29 flats seized by Bank in Bangalore, hundreds homeless. Flat residents were shocked after a sudden raid by bank officials.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm