ಬ್ರೇಕಿಂಗ್ ನ್ಯೂಸ್
02-03-23 10:16 pm Mangalore Correspondent ಕ್ರೈಂ
ಮಂಗಳೂರು, ಮಾ.2: ಒಂದು ತಿಂಗಳ ಹಿಂದೆ ನಗರದ ಮಿಲಾಗ್ರಿಸ್ ಬಳಿ ಜುವೆಲ್ಲರಿ ಉದ್ಯೋಗಿಯನ್ನು ಕತ್ತು ಕೊಯ್ದು ಹತ್ಯೆಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಲಿಕೋಟೆಯ ಕೊಯಿಲಾಂಡಿ ನಿವಾಸಿ ಶಿಫಾಸ್ (33) ವಶಕ್ಕೆ ಪಡೆದ ಆರೋಪಿ. ಗುರುವಾರ ಮಧ್ಯಾಹ್ನ ಕ್ಯಾಲಿಕಟ್ ನಿಂದ ರೈಲಿನಲ್ಲಿ ಕಾಸರಗೋಡು ರೈಲು ನಿಲ್ದಾಣಕ್ಕೆ ಬಂದಿದ್ದ ಶಿಫಾಸ್, ಕಾಸರಗೋಡು ನಗರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣಕ್ಕೆ ಬಂದಾಗಲೇ ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸರು ಬಲೆಗೆ ಹಾಕಿದ್ದಾರೆ. ಕಾಸರಗೋಡು ಡಿವೈಎಸ್ಪಿ ಸುಧಾಕರನ್ ಮತ್ತು ಡಿಸಿ ಆರ್ ಬಿ ಡಿವೈಎಸ್ಪಿ ಅಬ್ದುಲ್ ರಹೀಂ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.


ಫೆ.3ರಂದು ಮಂಗಳೂರಿನಲ್ಲಿ ಜುವೆಲ್ಲರಿ ನುಗ್ಗಿ ರಾಘವ ಆಚಾರ್ಯ ಎಂಬವರನ್ನು ಹತ್ಯೆಗೈದಿದ್ದ ಆಗಂತುಕ ವ್ಯಕ್ತಿ ಆನಂತರ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದ. ಈ ನಡುವೆ, ಆರೋಪಿ ಪತ್ತೆಗಾಗಿ ಸಿಸಿಟಿವಿಯಲ್ಲಿ ದೊರೆತ ಫೋಟೊಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕಿ ಪರಾರಿಯಾಗಿದ್ದ ಆರೋಪಿಯ ಚಹರೆಯನ್ನು ಪೊಲೀಸರು ನೋಟೀಸ್ ಮೂಲಕ ವಿವಿಧ ಕಡೆಗಳಲ್ಲಿ ಅಂಟಿಸಿದ್ದರು. ಆರೋಪಿ ಮಾಹಿತಿ ಸಿಕ್ಕಲ್ಲಿ ಪೊಲೀಸರಿಗೆ ನೀಡುವಂತೆ ಕೇಳಿಕೊಂಡಿದ್ದರು.


ಒಂದು ತಿಂಗಳ ಕಾಲವೂ ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಅಚಾನಕ್ಕಾಗಿ ಬಲೆಗೆ ಬಿದ್ದಿದ್ದಾನೆ. ಆದರೆ ಯಾಕಾಗಿ ಈ ಕೃತ್ಯ ಎಸಗಿದ್ದಾನೆ ಎನ್ನೋದು ಭಾರೀ ಕುತೂಹಲ ಸೃಷ್ಟಿಸಿದೆ. ಮಂಗಳೂರು ಪೊಲೀಸರು ಇನ್ನಷ್ಟೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಷ್ಟೆ.
Jewellery shop staffer murdered in Mangaluru, accused arrested in Kasaragod after months. The arrested has been identifed as Shifas (33) from kerala. Raghavendra Acharya alias Raghu (55), working in the shop since seven months, was murdered inside the shop at Hampankatta
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm