ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm