ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm