ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm