ಬ್ರೇಕಿಂಗ್ ನ್ಯೂಸ್
11-03-23 04:31 pm Mangalore Correspondent ಕ್ರೈಂ
ಮಂಗಳೂರು, ಮಾ.11 : ಪೊಲೀಸ್ ಅಂತ ಹೇಳಿ ಸಿನಿಮಾ ನಟಿಯೋರ್ವಳ ತಾಯಿಯನ್ನು ಬ್ಲಾಕ್ಮೇಲ್ ಮಾಡಿ ಹಣ ಪೀಕಿದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ ನಗರ ನಿವಾಸಿ ಶಿವರಾಜ್ ದೇವಾಡಿಗ ಬಂಧಿತ ಆರೋಪಿ.
ತನ್ನನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸ್ ಎಂದು ಪರಿಚಯಿಸಿ ಮಹಿಳೆಯ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬ ಬ್ಲಾಕ್ಮೇಲ್ ಮಾಡಿದ್ದಾನೆ. ನಿಮ್ಮಲ್ಲಿ ನಗದು ಹಣ ಇದೆ, ಬಂಗಾರ ಇದೆಯೆಂದು ದೂರು ಬಂದಿದೆ. ಕಮಿಷನರ್ ಸಾಹೇಬ್ರ ಬಳಿಗೆ ನಿಮ್ಮ ಕೇಸ್ ಹೋಗಿದೆ, ಹಣ ಕೊಟ್ಟರೆ ಪ್ರಕರಣ ಮುಚ್ಚಿ ಹಾಕ್ತೀನಿ ಎಂದು ಹೇಳಿದ್ದ. ತನ್ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸ್ ಶಿವರಾಜ್ ದೇವಾಡಿಗ ಅಂತಾ ಪರಿಚಯ ಹೇಳಿಕೊಂಡಿದ್ದ. ಸಾಹೇಬ್ರು ಈಗ ರೈಡ್ ಮಾಡ್ತಾರೆ, ಗೂಗಲ್ ಪೇ ಮಾಡಿ ಹಣ ಕೊಟ್ಟರೆ ರೈಡ್ ಮಾಡಲ್ಲ ಅಂತ ಹೇಳಿದ್ದ.
ಆನಂತರ ತನ್ನ ನಂಬರಿನಿಂದ ಕರೆ ಮಾಡಿ ಅದೇ ನಂಬರ್ ಗೆ ಆನ್ಲೈನ್ ಮೂಲಕ ಹಣ ಹಾಕಿಸಿಕೊಂಡಿದ್ದ. ಮೊದಲಿಗೆ 20 ಸಾವಿರ, ಆನಂತರ 18 ಸಾವಿರ ಹೀಗೆ ಒಟ್ಟು 38 ಸಾವಿರ ಹಣ ನೀಡಿದ್ದರು. ಅಲ್ಲದೆ, ಸಾಹೇಬ್ರ ಜೊತೆ ಸಹಕರಿಸಿದ್ರೆ ತೊಂದರೆ ಆಗಲ್ಲ ಅಂತ ಹೇಳಿದ್ದ.
ಪೊಲೀಸರ ರೀತಿ ಸಮವಸ್ತ್ರ, ಖಾಕಿ ಶೂ ಹಾಕಿ ಬಂದು ಬೆದರಿಸಿದ್ದರಿಂದ ಹೆದರಿದ್ದ ಮಹಿಳೆ, ಹಣ ಕೊಟ್ಟಿದ್ದರು. ಅಲ್ಲದೆ, ಹೊಸ ಕಮಿಷನರ್ ಬಂದಿದ್ದಾರೆ, ಅವರ ಟೇಬಲ್ ಮೇಲೆ ಫೈಲ್ ಇದೆ. ಕೇಸ್ ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದಿದ್ದ. ಈ ಬಗ್ಗೆ ಮಹಿಳೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಪೊಲೀಸರ ಸೋಗಿನಲ್ಲಿ ಹಣ ಪೀಕಿಸಿದ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಮಹಿಳೆಯನ್ನು ಸಂಪರ್ಕಿಸಿದ ಪೊಲೀಸರು ಆರೋಪಿ ಪತ್ತೆ ಮಾಡಿದ್ದಾರೆ. ಬಳಿಕ ಮಹಿಳೆಯಿಂದ ದೂರು ಪಡೆದು ಆರೋಪಿ ವಿರುದ್ಧ ಕೇಸು ದಾಖಲಿಸಿದ್ದಾರೆ.
Mangalore Man arrested for blackmailing women who is a mother of Kannada actress running a beauty parlour in city. The accused was posing as pandeshwar police constable and blackmailing her of raid.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm