ಬ್ರೇಕಿಂಗ್ ನ್ಯೂಸ್
22-03-23 06:46 pm Mangalore Correspondent ಕ್ರೈಂ
ಮಂಗಳೂರು, ಮಾ.22: 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್ ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕ ವೃತ್ತಿಯಲ್ಲಿದ್ದ ವ್ಯಕ್ತಿಯೊಬ್ಬನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಶಿಕ್ಷೆ ನೀಡಿದೆ.
ಕಾವೂರು ಠಾಣೆ ವ್ಯಾಪ್ತಿಯ ಮರಕಡ ನಿವಾಸಿ ದಯಾನಂದ ದಾನನ್ನವರ್(30) ಶಿಕ್ಷೆಗೊಳಗಾದ ವ್ಯಕ್ತಿ. ಅಪ್ರಾಪ್ತ ಬಾಲಕಿ ಈತನಿಗೆ ಇನ್ ಸ್ಟಾ ಗ್ರಾಮ್ ಮೂಲಕ ಪರಿಚಯ ಆಗಿದ್ದಳು. ಆನಂತರ, ಬಸ್ ಚಾಲಕನಾಗಿದ್ದ ವ್ಯಕ್ತಿ ಆಕೆಯನ್ನು ತನ್ನೊಂದಿಗೆ ಬರುವಂತೆ ಪುಸಲಾಯಿಸುತ್ತಿದ್ದ. ಆದರೆ ಬರಲು ಕೇಳದೇ ಇದ್ದಾಗ 2022ರ ಜನವರಿ 28ರಂದು ಮರಕಡದಿಂದ ಆಟೋ ರಿಕ್ಷಾದಲ್ಲಿ ಕರೆದೊಯ್ದಿದ್ದು, ನೇರವಾಗಿ ಹಂಪನಕಟ್ಟೆ ಬಳಿಯ ಲಾಡ್ಜ್ ಒಂದಕ್ಕೆ ಕರೆದೊಯ್ದಿದ್ದ. ಅಲ್ಲಿ ಲೈಂಗಿಕ ಕಿರುಕುಳ ನೀಡಿದ್ದು, ಆನಂತರ ಆಕೆಯನ್ನು ಮನೆಗೆ ಕಳುಹಿಸಿಕೊಟ್ಟಿದ್ದ.
ಅಲ್ಲದೆ, ಮನೆಯಲ್ಲಿ ಯಾರಿಗೂ ಈ ಬಗ್ಗೆ ಹೇಳಬೇಡ. ಹೇಳಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ದಯಾನಂದ ಬೆದರಿಕೆ ಒಡ್ಡಿದ್ದ. ಆದರೆ ಬಾಲಕಿ ತನ್ನ ಮೇಲಾದ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದ್ದು ಹೆತ್ತವರು ಕಾವೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 50 ಸಾವಿರ ದಂಡ ವಿಧಿಸಿದ್ದು, ದಂಡ ತೆರಲು ತಪ್ಪಿದಲ್ಲಿ ನಾಲ್ಕು ತಿಂಗಳ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದ್ದಾರೆ.
ಇದಲ್ಲದೆ, ಸಂತ್ರಸ್ತ ಯುವತಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಮಾಡಿದೆ. ಅದರಲ್ಲಿ ಒಂದು ಲಕ್ಷ ಕೂಡಲೇ ಆಕೆಯ ಶಿಕ್ಷಣಕ್ಕಾಗಿ ಬಿಡುಗಡೆ ಮಾಡಬೇಕು. ಉಳಿದ ಎರಡು ಲಕ್ಷ ರೂ.ವನ್ನು ಆಕೆಯ ಹೆಸರಲ್ಲಿ ರಾಷ್ಟ್ರೀಯ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಬೇಕು ಎಂದು ಆದೇಶ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಎಸ್ ಎಚ್ ಭಜಂತ್ರಿ ತನಿಖೆ ನಡೆಸಿ ದೋಷಾರೋಪ ಸಲ್ಲಿಸಿದ್ದರು. ಸರಕಾರದ ಪರವಾಗಿ ವೆಂಕಟರಮಣ ಸ್ವಾಮಿ ವಾದಿಸಿದ್ದರು.
Additional sessions and FTSC-2 (POCSO) court of the city sentenced a man, accused of sexual harassment of minor to 20 years in prison.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am