ಬ್ರೇಕಿಂಗ್ ನ್ಯೂಸ್
27-03-23 10:08 pm Mangalore Correspondent ಕ್ರೈಂ
ಮಂಗಳೂರು, ಮಾ.27: ಸುರತ್ಕಲ್ ಬಳಿಯ ಹೊಸಬೆಟ್ಟಿನ ಕುಳಾಯಿ ಎಂಬಲ್ಲಿ ಬಾಡಿಗೆ ಮನೆ ಪಡೆದು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.
ಮೀನಕಳಿಯ ನಿವಾಸಿ ವಿಕ್ರಂ ಅಲಿಯಾಸ್ ಜಯರಾಂ(30), ಕೊಡಿಯಾಲಬೈಲಿನ ಸತೀಶ್(50), ಕುಳಾಯಿ ಹೊನ್ನಕಟ್ಟೆಯ ಸರ್ಫರಾಜ್(37), ಬೈಕಂಪಾಡಿಯ ಅಕ್ಷಯ್ (33) ಬಂಧಿತರು. ಇವರು ಕುಳಾಯಿ ಗ್ರಾಮದ ಬಾಡಿಗೆ ಕೊಠಡಿಯಲ್ಲಿದ್ದುಕೊಂಡು ಗಾಂಜಾ ಮಾರಾಟ ಮತ್ತು ಸೇವನೆ ಮಾಡುತ್ತಿದ್ದರು. ಇವರಿಂದ 790 ಗ್ರಾಮ್ ಗಾಂಜಾ, ನಾಲ್ಕು ಮೊಬೈಲ್ ಫೋನ್, ಒಂದು ಆಟೋ ರಿಕ್ಷಾ, ತೂಕ ಮಾಪನ ವಶಕ್ಕೆ ಪಡೆದಿದ್ದು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಲೇಜು ಬಳಿ ಗಾಂಜಾ ಮಾರಾಟ
ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಇಡ್ಯಾ ಗ್ರಾಮದ ಗೋವಿಂದದಾಸ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇರಿಸ್ಸಾ ಮೂಲದ ಚಿಂತಾಮಣಿ ಮತ್ತು ದೂಬ ಎಂಬವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ 3 ಕೇಜಿ 180 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರ ಸೆರೆ
ಸೋಮವಾರ ಸಂಜೆ 4.30ಕ್ಕೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಜಂಕ್ಷನ್ ಬಳಿ ಮಟ್ಕಾ ಆಟವಾಡುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಅಬುಬಕ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿಂದ 750 ರೂ. ಹಣ ವಶಕ್ಕೆ ಪಡೆಯಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಬೋಳಿಯಾರು ಜಂಕ್ಷನ್ ಬಳಿ ಮಟ್ಕಾ ದಂಧೆ ನಡೆಸುತ್ತ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಪ್ರವೀಣ್ ಎಂಬಾತನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಬಳಿಯಿಂದ 1650 ರೂ. ಹಣ ವಶಕ್ಕೆ ಪಡೆಯಲಾಗಿದೆ.
Four arrested for sale of Ganja in rented house at Kulai in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm