ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm