ಬ್ರೇಕಿಂಗ್ ನ್ಯೂಸ್
02-04-23 09:05 pm Mangalore Correspondent ಕ್ರೈಂ
ಮಂಗಳೂರು, ಎ.2: ಸಲಿಂಗ ಕಾಮ ವಿಚಾರದಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.
2022ರ ಅಕ್ಟೋಬರ್ 7ರಂದು ಜಯಾನಂದ ಆಚಾರ್ಯ ಆರೋಪಿಯನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದರು. ಆದರೆ, ತಾವು ನೀಡಿದ ಭರವಸೆಯಂತೆ ಅನೈಸರ್ಗಿಕ ಲೈಂಗಿಕ ಕ್ರಿಯೆಯ ನಂತರ ಆರೋಪಿಗೆ ಹಣ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಪ್ಲಾಸ್ಟಿಕ್ ದಾರದಿಂದ ಕುತ್ತಿಗೆ ಬಿಗಿದು ಉಸಿರುಕಟ್ಟಿಸಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು.
ಜಯಾನಂದ ಆಚಾರ್ಯ ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹದ ಮೇಲೆ ಲುಂಗಿ ಹೊದಿಸಿ ಆರೋಪಿ ಪರಾರಿಯಾಗಿರುವುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ಸಾಬೀತಾಗಿದೆ ಎಂದು ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ಆರೋಪಿಯ ತಪ್ಪೊಪ್ಪಿಗೆ ಹೇಳಿಕೆಯೂ ಇದಕ್ಕೆ ಪೂರಕವಾಗಿದೆ. ಮರಣದಂಡನೆ ಶಿಕ್ಷೆ ವಿಧಿಸುವ ಪ್ರಕರಣ ಇದಾಗಿದ್ದು, ಆರೋಪಿಗೆ ಜಾಮೀನು ನೀಡಬಾರದು ಎಂದು ಪ್ರಾಸಿಕ್ಯೂಷನ್ ಪರ ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.
ಆರೋಪಿ ಅಪರಾಧ ಹಿನ್ನೆಲೆ ಹೊಂದಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇಂಥದ್ದೇ ಅಪರಾಧಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಅವರು ವಾದಿಸಿದ್ದರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಪೊಲೀಸರು ಆರೋಪ ಪಟ್ಟಿಯನ್ನೂ ಸಲ್ಲಿಸಿದ್ದಾರೆ. ಲಭ್ಯ ಸಾಕ್ಷ್ಯಾಧಾರಗಳನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಆರೋಪಿ ಸ್ಥಳೀಯನಾಗಿದ್ದ ಕಾರಣ ನ್ಯಾಯ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಆರೋಪಿ ಪರ ವಕೀಲರು ವಾದಿಸಿದ್ದರು. ಇದನ್ನು ಪರಿಗಣಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ಜೋಷಿ, ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ವಕೀಲ ಹರ್ಷಕುಮಾರ್ ವಾದಿಸಿದ್ದರು.
Gay partner murder in Mangalore, police register fake charge sheet, court issues bail to Rajesh Poojari.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm