ಬ್ರೇಕಿಂಗ್ ನ್ಯೂಸ್
05-04-23 10:18 pm Bangalore Correspondent ಕ್ರೈಂ
ಬೆಂಗಳೂರು, ಎ.5 : ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಆಕೆಯನ್ನು ಪ್ರಿಯಕರನೇ ಕೊಲೆಗೈದು ಸುಟ್ಟು ಹಾಕಿದ ಬಗ್ಗೆ ಸಂಶಯ ವ್ಯಕ್ತವಾಗಿದೆ. ಮಂಜು (32) ಕೊಲೆಯಾದ ಮಹಿಳೆ.
ಬೆಂಗಳೂರು ಹೊರವಲಯದ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರದಲ್ಲಿ ಘಟನೆ ನಡೆದಿದೆ. ದೇಹವನ್ನು ಕತ್ತರಿಸಿ ನಿರ್ಜನ ಪ್ರದೇಶ ಸುಟ್ಟು ಹಾಕಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅಲ್ಲಲ್ಲಿ ಚದುರಿ ಬಿದ್ದ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ.
ಮಂಜುವನ್ನು ಕೊಲೆಗೈದಿರುವ ಬಗ್ಗೆ ಸಂಬಂಧಿಕರು ಆರೋಪಿಸಿದ್ದಾರೆ. ಈ ಕುರಿತು ಹೆಬ್ಬಗೋಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜು ಜತೆ 10 ವರ್ಷಗಳಿಂದ ನಾರಾಯಣ್ ಎಂಬಾತ ಅನೈತಿಕ ಸಂಬಂಧದಲ್ಲಿದ್ದು ಆತನೇ ಕೊಲೆಗೈದ ಆರೋಪ ಕೇಳಿಬಂದಿದೆ. ನಾರಾಯಣ್ ಸಂಪಿಗೆನಗರದಲ್ಲಿ ಕಿರಾಣಿ ಅಂಗಡಿ ನಡೆಸ್ತಿದ್ದರೆ, ಮಂಜು ಅಪಾರ್ಟ್ಮೆಂಟ್ ಗಳಲ್ಲಿ ಮನೆಕೆಲಸ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮಂಜು ಜೊತೆ ನಾರಾಯಣ್ ಜಗಳವಾಡಿದ್ದು ನೀನು ಕೆಲಸಕ್ಕೆ ಹೋಗಬಾರದೆಂದು ತಾಕೀತು ಮಾಡಿದ್ದ ಎನ್ನಲಾಗಿದೆ. ಆದರೆ ನಾರಾಯಣ್ ಮಾತನ್ನು ಲೆಕ್ಕಿಸದೆ ಮಂಜು ಕೆಲಸಕ್ಕೆ ಹೋಗಿದ್ದಳು.
ಮಾ.29ರಿಂದ ಮಹಿಳೆ ಕಾಣೆಯಾಗಿದ್ದು ಹೆಬ್ಬಗೋಡಿ ಠಾಣೆಗೆ ತಂಗಿ ಲಕ್ಷ್ಮಿ ನಾಪತ್ತೆ ದೂರು ನೀಡಿದ್ದಳು. ಈ ನಡುವೆ, ನಿರ್ಜನ ಪ್ರದೇಶದಲ್ಲಿ ಸುಟ್ಟು ಹೋಗಿದ್ದ ಸ್ಥಿತಿಯಲ್ಲಿ ಶವ ಸಿಕ್ಕಿತ್ತು. ಸಂಶಯದಲ್ಲಿ ಮಂಜು ತಂಗಿ ಲಕ್ಷ್ಮಿಯನ್ನು ಕರೆದು ಪೊಲೀಸರು ತೋರಿಸಿದ್ದು ಚಪ್ಪಲಿ, ಕೈ ಬಳೆ ಕಂಡು ದೇಹದ ಗುರುತು ಹಿಡಿದಿದ್ದಾಳೆ. ಇದೀಗ ಸಂಪಿಗೆನಗರ ನಿವಾಸಿ ನಾರಾಯಣ್ ಮೇಲೆ ಕೊಲೆ ಆರೋಪ ದಾಖಲಾಗಿದೆ. ಇದೇ ವೇಳೆ, ಆರೋಪಿ ನಾರಾಯಣ್ ನಾಪತ್ತೆಯಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore married woman murdered by boyfriend over work issue. The deceased has been knows as Manju. Manju and Narayan had illecit affair from past 10 years. Manju was burnt and cut into pieces aftee manju began to to work which Narayan didn't like.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm