ಬ್ರೇಕಿಂಗ್ ನ್ಯೂಸ್
26-10-20 02:10 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 26: ಯುವತಿಯನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ನಾಪತ್ತೆಯಾಗಿದ್ದ ಯುವಕನನ್ನು ಹಿರಿಯಡ್ಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಸ್ವಸ್ಥಳಾಗಿದ್ದ ಯುವತಿಯನ್ನು ಶನಿವಾರ ಸಂಜೆ ಗಾಂಧಿ ಆಸ್ಪತ್ರೆಗೆ ಕರೆತಂದಿದ್ದ ಯುವಕ ಪ್ರಶಾಂತ್ ಕುಂದರ್ ಎಂಬಾತ ಅಲ್ಲಿಂದ ದಿಢೀರ್ ನಾಪತ್ತೆಯಾಗಿದ್ದ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಳು. ಯುವತಿಯ ಕುತ್ತಿಗೆಯ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದ ರೀತಿ ಇದ್ದುದರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಯುವತಿ ಮನೆಯವರು ಆಘಾತಗೊಂಡಿದ್ದಲ್ಲದೆ, ಪುತ್ರಿಯ ಸಾವಿನ ಬಗ್ಗೆ ಏನು ಹೇಳುವುದೆಂದು ತೋಚದಾಗಿದ್ದರು.
ಯುವತಿ ಸಾವಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅನುಮಾನ ಕೇಳಿಬರುತ್ತಿದ್ದರೂ, ಮನೆಯವರು ಶಂಕೆ ವ್ಯಕ್ತಪಡಿಸಿ ದೂರನ್ನು ದಾಖಲಿಸಿಲ್ಲ ಎನ್ನುವ ವಿಚಾರ ಗೊತ್ತಾಗಿದೆ. ಹೀಗಾಗಿ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುವ ಬಗ್ಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಅಲ್ಲದೆ, ಬಂಧನ ಅಂತ ತೋರಿಸುವುದಕ್ಕೂ ಸಾಧ್ಯವಾಗಲ್ಲ ಎನ್ನುತ್ತಿದ್ದಾರೆ. ಸಾರ್ವಜನಿಕ ಅನುಮಾನಕ್ಕೆ ಕಾರಣವಾದ ಪ್ರಕರಣದಲ್ಲಿ ಪೊಲೀಸರಿಗೆ ಸುಮೊಟೋ ಕೇಸು ದಾಖಲಿಸುವ ಅವಕಾಶ ಇದೆ. ಅದನ್ನು ಮಾಡುತ್ತಾರೋ ಗೊತ್ತಿಲ್ಲ.

ಆತನಿಗೆ ಬೇರೆ ಮದುವೆಯಾಗಿತ್ತು !
ಯುವತಿಯನ್ನು ಆಸ್ಪತ್ರೆಗೆ ತಂದು ಬಿಟ್ಟುಹೋಗಿದ್ದ ಯುವಕ ಪ್ರಶಾಂತ್ ಕುಂದರ್ ಗೆ ಬೇರೆ ಮದುವೆಯಾಗಿತ್ತು. ಅಲ್ಲದೆ, ಉಪ್ಪೂರಿನಲ್ಲಿ ಪತ್ನಿಯ ಜೊತೆ ಬಾಡಿಗೆ ಮನೆ ಮಾಡಿಕೊಂಡಿದ್ದಾನೆ. ಉಡುಪಿಯಲ್ಲಿ ಫರ್ನಿಚರ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ.
ಮಾಡೆಲಿಂಗ್ ಹುಚ್ಚು ಕಟ್ಟಿಕೊಂಡಿದ್ದ ಹುಡುಗಿ
ಮಣಿಪಾಲದ ಖಾಸಗಿ ಕಾಲೇಜು ಒಂದರಲ್ಲಿ ಬಿಕಾಂ ಕಲಿಯುತ್ತಿದ್ದ ರಕ್ಷಿತಾ ನಾಯಕ್, ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ಟಿವ್ ಆಗಿದ್ದಳು. ಅದರಲ್ಲೂ ಇನ್ ಸ್ಟಾ ಗ್ರಾಮಿನಲ್ಲಿ ತನ್ನ ಥರಾವರಿ ಫೋಟೋಗಳನ್ನು ಹಾಕ್ಕೊಂಡು ಭಾರೀ ಫಾಲೋವರ್ಸ್ ಗಳಿಸಿದ್ದರು. ಆಕೆಯ ಹುಚ್ಚು ನೋಡಿ 40 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಗಳಾಗಿದ್ದರಂತೆ. ಉಡುಪಿಯಿಂದ 15 ಕಿಮೀ ದೂರದಲ್ಲಿರುವ ಹಿರಿಯಡ್ಕ ಬಳಿಯ ಕುಕ್ಕೆಹಳ್ಳಿ ಗ್ರಾಮದ ನಿವಾಸಿಯಾಗಿರುವ ರಕ್ಷಿತಾಳದ್ದು ತೀರಾ ಮಧ್ಯಮ ವರ್ಗದ ಕುಟುಂಬ. ಆದರೆ, ಒಂದೂವರೆ ವರ್ಷದಿಂದ ಉಡುಪಿಯಲ್ಲಿ ರೂಂ ಮಾಡಿಕೊಂಡಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು ಎನ್ನಲಾಗಿದೆ. ತಾನು ಮಾಡೆಲ್ ಆಗ್ತೀನಿ ಎಂದು ಹುಚ್ಚು ಕಟ್ಟಿಕೊಂಡಿದ್ದ ರಕ್ಷಿತಾ ಜಾಲತಾಣದಲ್ಲಿ ಅರ್ಧಂಬರ್ಧ ತೋಳಿನ ಅಂಗಿಗಳನ್ನು ಧರಿಸಿ, ಫೋಟೋಗಳನ್ನು ಪೋಸ್ಟ್ ಮಾಡುತ್ತಿದ್ದಳು. ಇದು ಮನೆಯವರಿಗೆ ಇಷ್ಟವಾಗುತ್ತಿರಲಿಲ್ಲ.



ಅಂತೆ ಕಂತೆಗಳಿಗೆ ಉತ್ತರ ಬೇಕಲ್ಲ ?
ಈ ನಡುವೆ, ಪ್ರಶಾಂತ್ ಕುಂದರ್ ಮತ್ತು ರಕ್ಷಿತಾ ನಡುವೆ ಪರಿಚಯ ಆಗಿದ್ದು ಸಂಬಂಧ ಬೆಳೆದಿದೆ ಎನ್ನಲಾಗುತ್ತಿದೆ. ಉಡುಪಿಯ ಅಂಬಾಗಿಲಿನಲ್ಲಿ ರೂಂ ಮಾಡಿಕೊಂಡಿದ್ದ ರಕ್ಷಿತಾ ಮನೆಗೆ ಬಂದು ಹೋಗುತ್ತಿದ್ದ. ಆದರೆ, ಇತ್ತೀಚೆಗೆ ಗಂಡನ ಸಂಬಂಧದ ವಿಚಾರ ಅರಿತ ಪ್ರಶಾಂತ್ ಪತ್ನಿ, ರಕ್ಷಿತಾಳಿಗೆ ಫೋನ್ ಮಾಡಿ ದಬಾಯಿಸಿದ್ದಾಳೆ. ಹೀಗಾಗಿ ನೊಂದುಕೊಂಡಿದ್ದ ಹುಡುಗಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಯುವತಿಯ ಕುತ್ತಿಗೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಲೆಗಳಿದ್ದುದರಿಂದ ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಕಾರಣ ತಿಳಿಯಬಹುದಷ್ಟೆ. ಆದರೆ, ಒಟ್ಟು ವೃತ್ತಾಂತವನ್ನು ಪ್ರಶಾಂತ್ ಕುಂದರ್ ಒಬ್ಬನೇ ಹೇಳಬೇಕಷ್ಟೆ..
A young woman Rakshitha Nayak died under suspicious circumstances in a private hospital in Udupi. The man who was absconding Prashanth Kunder has been arrested by Udupi police.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am