ಬ್ರೇಕಿಂಗ್ ನ್ಯೂಸ್
26-04-23 12:27 pm Bangalore Correspondent ಕ್ರೈಂ
ಬೆಂಗಳೂರು, ಎ.26: ಲೈಂಗಿಕ ಕಿರುಕುಳ ನೀಡುತ್ತಿದ್ದ ರ್ಯಾಪಿಡೊ ಚಾಲಕನಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ನಿಂದಲೇ ಜಿಗಿದಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಆರ್ಕಿಟೆಕ್ಚರ್ ಆಗಿರುವ 30 ವರ್ಷದ ಯುವತಿಯೊಬ್ಬಳು ಕಳೆದ ಏ. 21ರಂದು ರಾತ್ರಿ 11.30ರ ಸುಮಾರಿನಲ್ಲಿ ಆನ್ಲೈನ್ ಆಯಪ್ ಮೂಲಕ ರ್ಯಾಪಿಡೊ ಬೈಕ್ ಅನ್ನು ಬುಕ್ ಮಾಡಿದ್ದಳು. ನಿಗದಿತ ಸ್ಥಳಕ್ಕೆ ಬಂದ ರ್ಯಾಪಿಡೊ ಬೈಕ್ ಚಾಲಕ ಯುವತಿಯನ್ನು ಹತ್ತಿಸಿಕೊಂಡಿದ್ದು, ಅಲ್ಲಿಂದ ಇಂದಿರಾನಗರಕ್ಕೆ ಬೈಕ್ ತೆರಳಬೇಕಿತ್ತು. ಆದರೆ, ಆತ ಅಲ್ಲಿಗೆ ಕರೆದೊಯ್ಯದೆ ಒಟಿಪಿ ಪರಿಶೀಲಿಸುವ ನೆಪದಲ್ಲಿ ಆಕೆಯ ಫೋನ್ ತೆಗೆದುಕೊಂಡು ದೊಡ್ಡಬಳ್ಳಾಪುರಕ್ಕೆ ಹೋಗಲು ಯತ್ನಿಸಿದ್ದಾನೆ. ಬೈಕ್ ನಿಗದಿತ ಸ್ಥಳಕ್ಕೆ ಹೋಗದೆ ಇರುವುದನ್ನು ಗಮನಿಸಿದ ಯುವತಿ ಕೂಡಲೇ ಚಾಲಕನನ್ನು ಪ್ರಶ್ನಿಸಿದ್ದಾಳೆ. ಆದರೆ ಇದ್ಯಾವುದಕ್ಕೂ ಉತ್ತರಿಸದ ಆತ ಬೈಕ್ ವೇಗವನ್ನು ಹೆಚ್ಚಿಸಲು ಮುಂದಾಗಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ ಕೂಡಲೇ ಆತನ ಬಳಿಯಿದ್ದ ತನ್ನ ಫೋನ್ನನ್ನು ಕಸಿದುಕೊಂಡು, ಗಾಡಿ ನಿಲ್ಲಿಸುವಂತೆ ಹೇಳಿದ್ದಾಳೆ.
ಚಾಲಕ ಗಾಡಿ ನಿಲ್ಲಿಸದೇ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ. ಆತನಿಂದ ರಕ್ಷಿಸಿಕೊಳ್ಳಲು ಬಿಎಂಎಸ್ ಕಾಲೇಜು ಸಮೀಪ ಚಲಿಸುತ್ತಿದ್ದಾಗಲೇ ರಾಪಿಡೊ ಬೈಕಿನಿಂದ ಜಿಗಿದಿದ್ದಾಳೆ.
ತನಗಾದ ಕರಾಳ ಅನುಭವವನ್ನು ಯುವತಿ ಪೊಲೀಸ್ ದೂರಿನಲ್ಲಿ ಹಂಚಿಕೊಂಡಿದ್ದು, ಈ ಸಂಬಂಧ ರ್ಯಾಪಿಡೋ ಸಂಸ್ಥೆಗೂ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ಯುವತಿಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಲೈಂಗಿಕ ಕಿರುಕುಳ, ಅಪಹರಣ, ಹಲ್ಲೆ ಅಥವಾ ಕ್ರಿಮಿನಲ್ ಕೇಸ್ ದಾಖಲು ಮಾಡಿ ತನಿಖೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
A 30-year-old Bengaluru woman resorted to jumping off a moving Rapido motorcycle after the driver groped her, snatched her phone, and tried to take her to a different destination.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm